ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ; ಮಂಗಳೂರಿನಿಂದ ಅಂಕೋಲಾದ ದೇವಸ್ಥಾನ ಒಂದಕ್ಕೆ ಒಂದಿದ್ದ ಒಂದೇ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿ ಐವರ ಪೈಕಿ ದಂಪತಿಗಳಿಬ್ಬರೂ ಮೃತ ಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಜಮಗೋಡ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ನಾಗೇಂದ್ರ ಸದಾಶಿವ (72), ಸುಧಾ ನಾಗೇಂದ್ರ (65) ಮೃತಪಟ್ಟವರಾಗಿದ್ದಾರೆ. ಇನ್ನೂ ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಅವರನ್ನ ಕಾರವಾರ ಜಿಲ್ಲಾ‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇವರು ಮಂಗಳೂರಿನಿಂದ‌ ಕುಟುಂಬ ಸಮೇತರಾಗಿ ಅಂಕೋಲಾಕ್ಕೆ ದೇವಸ್ಥಾನಕ್ಕೆ ಬಂದಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ‌ ಬಗ್ಗೆ ಅಂಕೋಲಾ ಪೊಲೋಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಮನಿಸಿ