ಸುದ್ದಿಬಿಂದು ಬ್ಯೂರೋ ವರದಿ (Suddibindu Digital news)
ಕುಂದಾಪುರ: ಮಹಿಳೆಯೊಬ್ಬರು ಹೊಸದಾಗಿ ಖರೀದಿಸಿದ ಜಮೀನಿನ ನೋಂದಾಯಿಸಲು ಹೋಗದ ವೇಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ .ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಸಮೀಪ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಬಳ್ಕೂರಿನ ನಿವಾಸಿ ಶ್ರುತಿ (33) ಎಂದು ಗುರುತಿಸಲಾಗಿದೆ. ಶ್ರುತಿ ಮತ್ತು ವಿನಯ್ ಅಂರ್ತಜಾತಿ ವಿವಾಹವಾಗಿದ್ದರು. ಶ್ರುತಿ ಸಾಲಿಗ್ರಾಮದ ಬ್ರಾಹ್ಮಣ ಕುಟುಂಬದವರಾಗಿದ್ದು,. ಕಾಲೇಜಿನ ದಿನಗಳಲ್ಲಿ ವಿನಯ್ ಅವರಮ್ ಮೇಲೆ ಪ್ರೀತಿಸಿ ವಿವಾಹವಾಗಿದ್ದರು. ಸದ್ಯ ಬಳ್ಕೂರಿನಲ್ಲಿ ವಾಸವಾಗಿದ್ದರು. ಇವರು ಕೆಲ ದಿನಗಳ ಹಿಂದೆ ಬಳ್ಕೂರಿನ ಸಮೀಪ ಹೊಸದಾಗಿ ಜಾಗವೊಂದನ್ನ ಖರೀದಿ ಮಾಡಿದ್ದರು. ಈ ಸಂಬಂಧವಾಗಿ ಜಮೀನು ನೋಂದಣಿ ಮಾಡಿಸಿಕೊಳ್ಳಲು ಕಚೇರಿಗೆ ಹೋಗಿದ್ದರು.
ಈ ವೇಳೆಯಲ್ಲಿ ಸ್ಕೂಟಿ ಮೇಲೆ ಬಳ್ಕೂರಿಗೆ ಹೋಗಿ ಅಲ್ಲೇ ಸಮೀಪದಲ್ಲಿರುವ ನದಿಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.ಈ ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು. ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ. ಆದರೆ ಹಣಕಾಸಿನ ವಹಿವಾಟಿನಲ್ಲಿ ಏನೋ ಮೋಸ ನಡೆದಿರುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ.
ಇದನ್ನೂ ಓದಿ
- ಕರಾವಳಿಯಲ್ಲಿ ಭಾರೀ ಮಳೆ: ನಾಳೆ ಎಲ್ಲೆಲ್ಲಿ ಶಾಲೆ–ಕಾಲೇಜುಗಳಿಗೆ ರಜೆ?
- ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರ ಬದ್ಧ: ಉನ್ನತ ಮಟ್ಟದ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ
- ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ : ಬೈಕ್ ಸವಾರನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು,
- ಮೆಹೆಂದಿ ರಂಗು ಮಾಸುವ ಮುನ್ನವೇ ವಿಧಿಯ ಕ್ರೂರ ಆಟ: ಬೈಕ್ ಸ್ಕಿಡ್ ನವವಧು ಸ್ಥಳದಲ್ಲೇ ಸಾವು, ಪತಿ ಗಂಭೀರ..!

