ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ: ಕಾರು ಮತ್ತು ಬೈಕ್ ನಡುವೆ ಅಪಘಾತ ಉಂಟಾಗಿ ಬೈಕ್ ಹಿಂಬದಿಯಲ್ಲಿ ಕುಳಿತ್ತಿದ್ದ ಯುವತಿ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ.
ಅಪಘಾತದಲ್ಲಿ ಪೂಜಾ ಪ್ರಭಾಕರ ಗೌಡ
ಹಳದಿಪುರ ಅಪ್ಪಿಕೇರಿ ಎಂಬಾಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸುರೇಶ ಗಣಪು ಗೌಡ ಎಂಬಾತ ಬೈಕ್ ಚಲಿಸುತ್ತಿದ್ದು, ಈ ವೇಳೆ ಶರಾವತಿ ಸೇತುವೆ ಮೇಲೆ ಎದುರಿಗೆ ಬರುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದ್ದು, ಇದರಿಂದಾಗಿ ಬೈಕ್ ಹೆದ್ದಾರಿಯಲ್ಲಿ ಬಿದ್ದ ರಭಸಕ್ಕೆ ಬೈಕ್ ಹಿಂಬದಿ ಕುಳಿತ್ತಿದ್ದ ಯುವತಿ ಪೂಜಾ ತಲೆಗೆ ಗಂಭೀರವಾಗಿ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇಬ್ಬರೂ ಕೂಡ ನಿನ್ನೆ ನಡೆದ ಮುರುಡೇಶ್ವರ ಜಾತ್ರೆಗೆ ಹೋಗಿದ್ದು, ಇಂದು ವಾಪಸ್ ಊರಿಗೆ ಬರುವಾಗ ಈ ಅಪಘಾತ ನಡೆದಿದೆ.
ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗಮಿಸಿದ್ದಾರೆ.
ಇದನ್ನೂ ಓದಿ