ಸುದ್ದಿಬಿಂದು ಬ್ಯೂರೋ ವರದಿ (Suddibindu Digital news)
ಕಲಬುರಗಿ( Kalburgi : ಲಾರಿ ಮತ್ತು ಕಾರ್ ನಡುವೆ ಅಪಘಾತ(accident) ಉಂಟಾಗಿ ಸ್ಥಳದಲ್ಲೆ ಮೂವರು ಮೃತಪಟ್ಟು ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮಗದಂಪುರ ಬಳಿ ನಡೆದಿದೆ.

ಅಪಘಾತದಲ್ಲಿ ಅವಿನಾಶ್( 24 ) ಅಭಿಷೇಕ್ (26) ಸಂಜೀವ್ (40) ಸ್ಥಳದಲ್ಲೇ ಮೃತಪಟ್ಟವರಾಗಿದ್ದಾರೆ. ಬೀದರ್ ನಿಂದ ತೆಲಂಗಾಣದ ಧಾರೂರ್ ಗೆ ತೆರಳ್ತಿದ್ದ ಕಾರ್ ಹಾಗೂ ತೆಲಂಗಾಣದಿಂದ‌ ಚಿಂಚೋಳಿ ಕಡೆ ಹೋಗುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇನ್ನೂ ಮೂರಿಗೆ ಜನರು ಸಾವು ಅಪಘಾತದಲ್ಲಿ ಮೂರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಕುರಿತಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಮನಿಸಿ