ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರಕನ್ನಡ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಹಿರೇಗುತ್ತಿ ಇವರ ಆಶ್ರಯದಲ್ಲಿ ಬೀರಣ್ಣ ಎಮ್. ನಾಯಕ ಹಿರೇಗುತ್ತಿಯವರ ಎಂಟನೆಯ ಕೃತಿ ‘ಅಂಟು ಬೆಲ್ಲದ ನಂಟು’ ಚುಟುಕು ಸಂಕಲನ ಬಿಡಿಗಡೆ ಸಮಾರಂಭ ಜ 27 ರಂದು ಮುಂಜಾನೆ 10.30ಕ್ಕೆ ಹಿರೇಗುತ್ತಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಬೆಂಗಳೂರಿನ ಹಿರಿಯ ಸಾಹಿತಿ ಡಾ. ಚಿಂತಾಮಣಿ ಕೊಡ್ಲೆಕೆರೆ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಶ್ರೀದೇವಿ ಕೆರೆಮನೆ, ಸೂರ್ವೆ ಪುಸ್ತಕ ಪರಿಚಯ ಮಾಡಲಿದ್ದಾರೆ.

ಹಿರೇಗುತ್ತಿಯ ಶ್ರೀ ಮಹಾತ್ಮಾ ಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ನಾಯಕ, ಹಿರಿಯ ಸಾಹಿತಿಗಳಾದ ರೋಹಿದಾಸ ನಾಯಕ, ಪುಟ್ಟು ಕುಲಕರ್ಣಿ, ವಿಶ್ರಾಂತ ಉಪನ್ಯಾಸಕ ಬೊಮ್ಮಯ್ಯ ಗಾಂವಕರ, ಹಿತ್ತಲಮಕ್ಕಿ, ಹಿರೇಗುತ್ತಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಾಜೀವ ನಾಯ್ಕ, ಕೋನಳ್ಳಿ, ಸೆಂಕೆಂಡರಿ ಹೈಸ್ಕೂಲ ಮುಖ್ಯಾಧ್ಯಾಪಕ ರೋಹಿದಾಸ ಗಾಂವಕರ ಮುಖ್ಯ ಅತಿಥಿಗಳಾಗಿರಲಿದ್ದಾರೆ. ಕೃತಿಕಾರ ಬೀರಣ್ಣ ನಾಯಕ, ಹಿರೇಗುತ್ತಿ ಗೌರವ ಉಪಸ್ಥಿತಿ ಇರಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಪಿ. ಆರ್. ನಾಯ್ಕ, ಜಾರ್ಜ್ ಫರ್ನಾಂಡೀಸ್, ಗೌರವ ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ಹಿರೇಗುತ್ತಿ ಸರಕಾರಿ ಪ.ಪೂ ಕಾಲೇಜು ಪ್ರಾಚಾರ್ಯ ರಾಜೀವ ನಾಯ್ಕ, ಕೋನಳ್ಳಿ ಹಾಗೂ ಉಪನ್ಯಾಸಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ