ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ : ಸವಣೂರಿನಿಂದ ಕುಮಟಾ ಸಂತೆಗೆ ತೆರಳುತ್ತಿದ್ದ ತರಕಾರಿ ತುಂಬಿದ ವಾಹನೊಂದು ಪಲ್ಟಿಯಾಗಿ ಸ್ಥಳದಲ್ಲೇ 9ಮಂದಿ ಸಾವನ್ನಪ್ಪಿರುವ ಘಟನೆ ಅರಬೈಲ್ ಸಮೀಪ ನಡೆದಿದೆ..
ಹಾವೇರಿ ಜಿಲ್ಲೆಯ ಸವಣೂರಿನಿಂದ ಯಲ್ಲಾಪುರ ಮಾರ್ಗವಾಗಿ ಕುಮಟಾ ಸಂತೆಗೆ ಬರುತ್ತಿದ್ದ ಟಾಟಾ ಕಂಪನಿಯ ಮೀನಿ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳಸಲ್ಲೇ ಮೃತ ಪಟ್ಟಿದ್ದಾರೆ. ಪಲ್ಟಿಯಾದ ರಭಸಕ್ಕೆ ವಾಹನ ಪುಡಿಪುಡಿಯಾಗಿದೆ. ಎನ್ನಲಾಗಿದೆ. ಮೃತ ದೇಹವನ್ನ ಯಲ್ಲಾಪುರ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ..ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿದ್ದಾರೆ..
ಗಮನಿಸಿ