ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ :ಗೋ ಕಳ್ಳತನ ಸೇರಿದಂತೆ ಅನೇಕ ಅಪರಾದ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರ ಬಂಧನದಿಂದ ಕಳೆದ ಮೂರು ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ..
ಫಾರುಖ್@ಫಾರುಖುಲ್ಲಾ ಭೋಗಿಬಾಷಾ ಎಂಬಾತನೆ ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶಿರಾಳಕೊಪ್ಪದ ಹಳ್ಳೂರು ಕೇರಿ ನಿವಾಸಿಯಾಗಿದ್ದು,
ಈತನ ಮೇಲೆ ಜಿಲ್ಲೆಯ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಜಾನುವಾರು ಕಳ್ಳತನ,ಸಿದ್ದಾಪುರ ಠಾಣೆಯಲ್ಲಿ ಮಂದಿರ ಕಳ್ಳತನ, ಹಾಗೂ ಶಿವಮೊಗ್ಗ ಜಿಲ್ಲೆಯ ಹೊಸನಗರ,ದೊಡ್ಡಪೇಟೆ,ಶಿರಾಳಕೊಪ್ಪ,ಹಿರೆಕೆರೂರು,ಸೊರಬ, ಶಿಕಾರಿಪುರ, ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು.
ಇದೀಗ ಬಂಧನಕ್ಕೆ ಒಳಗಾಗಿರು ಆರೋಪಿ ಸುಮಾರು 15 ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದ್ದು, ಜಾನುವಾರ ಕಳ್ಳತನದ ಬಗ್ಗೆ ಹೆಚ್ಚಿನ ಪ್ರಕರಣಗಳು ಈತನ ಮೇಲಿದೆ.ಇನ್ನೂ ತೀರ್ಥಳ್ಳಿ ಪೊಲೀಸ್ ಠಾಣೆಯಲ್ಲಿ ಧೀರ್ಘಕಾಲದ (LPR NO: 24/24) ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿತನಾಗಿದ್ದಾನೆ..
ಇದನ್ನೂ ಓದಿ