ಸುದ್ದಿಬಿಂದು ಬ್ಯೂರೋ ವರದಿ(suddibindu digital news)
ಉಡುಪಿ: ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮಚ್ಚಟ್ಟು, ತೊಂಬಟ್ಟು ಗ್ರಾಮದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಲಕ್ಷ್ಮಿ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಪ್ರಕ್ರಿಯೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗಲಾಯಿತು. ಎಸ್‌ಪಿ ಡಾ. ಕೆ. ಅರುಣ್, ಹೆಚ್ಚುವರಿ ಎಸ್‌ಪಿ ಎಸ್.ಟಿ. ಸಿದ್ದಲಿಂಗಪ್ಪ ಅವರ ಉಪಸ್ಥಿತಿಯಲ್ಲಿ ತೊಂಬಟ್ಟು ಲಕ್ಷ್ಮಿಯವರ ಶರಣಾಗತಿ ಪ್ರಕ್ರಿಯೆ ನಡೆಯಿತು.

ಪೊಲೀಸ್ ಭದ್ರತೆಯೊಂದಿಗೆ ಎಸ್‌ಪಿ ಕಚೇರಿಗೆ ಬಂದಿದ್ದ ಲಕ್ಷ್ಮಿಯವರೊಂದಿಗೆ ಅವರ ಸಹೋದರ ವಿಠಲ ಪುಜಾರಿ ಮತ್ತು ಬಂಧುಗಳೂ ಇದ್ದರು. ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕುಂದಾಪುರ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಉಡುಪಿ ಡಿವೈಎಸ್ಪಿ ಡಿ.ಟಿ. ಪ್ರಭು ಮತ್ತು ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿಯವರು ಈ ಸಂದರ್ಭದಲ್ಲಿ ಹಾಜರಿದ್ದರು.

ಶಂಕರನಾರಾಯಣ ಮತ್ತು ಅಮಸೇಬೈಲುವಿನ ಪೊಲೀಸ್ ಠಾಣೆಗಳಲ್ಲಿ ಲಕ್ಷ್ಮಿಯವರ ವಿರುದ್ಧ ಮೂರು ಪ್ರಕರಣಗಳಿವೆ. ಇದಲ್ಲದೆ, ಇತರ ಯಾವುದೇ ಪ್ರಕರಣಗಳು ಇಲ್ಲದಿರುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಗಮನಿಸಿ