ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ; ಅನಾರೋಗ್ಯಕ್ಕೆ ಒಳಗಾಗಿ ಇದೀಗ ಚೇತರಿಸಿಕೊಂಡಿರುವ ಸ್ಯಾಂಡಲ್ವುಡ್ ಸ್ಟಾರ್ ನಟ ಶಿವರಾಜಕುಮಾರ್ ತಮ್ಮ ಇಷ್ಟವಾದ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಮೂರು ದಶಕದ ಬಳಿಕ ಪತ್ನಿ ಗೀತಾ ಶಿವರಾಜಕುಮಾರ ಜೊತೆ ಉತ್ತರಕನ್ನಡ ಜಿಲ್ಲೆಯ ಯಾಣಕ್ಕೆ ಭೇಟಿ ನೀಡಿದರು.
ಮೂರು ದಶಕಗಳ ಹಿಂದೆ ಶಿವರಾಜಕುಮಾರ್, ರಮೇಶ್ ಅರವಿಂದ್ ಪ್ರೇಮಾ ಅಭಿನಯದ ನಮ್ಮೂರ ಮಂದಾರ ಹೂವೇ ಸಿನಿಮಾದ ಚಿತ್ರಿಕರಣವನ್ನ ಯಾಣದಲ್ಲಿ ಮಾಡಲಾಗಿತ್ತು. ಇದೀಗ ಅದೇ ಜಾಗಕ್ಕೆ ಭೇಟಿ ನೀಡಿ ಹಳೆಯ ನೆನಪುಗಳನ್ನ ನೆನಪಿಸಿಕೊಂಡಿದ್ದಾರೆ.
ಶಿವರಾಜಕುಮಾರ ಯಾಣಕ್ಕೆ ಹೋಗಿರುವ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಆ ಫೋಟೋ ಜೊತೆಗೆ ‘ಬಾಳಿನ ಬೆನ್ನು ಹತ್ತಿ. ನೂರಾರು ಊರು ಸುತ್ತಿ.. ಏನೇನೋ ಕಂಡ ಮೇಲೂ.. ನಮ್ಮೂರೇ ನಮಗೆ ಮೇಲೂ..’ ನಮ್ಮೂರ ಮಂದಾರ ಹೂವೆ’ ನಂತರ ಮತ್ತೆ ತನ್ನ ಯಾಣ ಭೇಟಿಯ ಬಗ್ಗೆ ಬರೆದುಕೊಂಡಿದ್ದಾರೆ.
ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಸದ್ಯ ರಿಲ್ಯಾಕ್ಸ್ ಮೂಡ್ನಲ್ಲಿರುವ ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ನಮಗಿಷ್ಟ ಬಂದ ಸ್ಥಳ ಸುತ್ತುತ್ತಿದ್ದಾರೆ. ಯಾಣದಲ್ಲಿ ಸೂಪರ್ ಹಿಟ್ ಸಿನಿಮಾ ‘ನಮ್ಮೂರ ಮಂದಾರ ಹೂವೆ’ ಸಿನಿಮಾದ ಶೂಟಿಂಗ್ ಆಗಿತ್ತು. ಹಳೆಯ ಫೋಟೋ ಹಾಗೂ ಇತ್ತೀಚೆಗೆ ಭೇಟಿ ಕೊಟ್ಟ ಫೋಟೋವನ್ನ ಶೇರ್ ಮಾಡಿಕೊಂಡಿದ್ದಾರೆ.
ಇದನ್ನೂ ಗಮನಸಿ