ಸುದ್ದಿಬಿಂದು ಬ್ಯೂರೋ ವರದಿ
ಕುಮಟ : ತಾಲೂಕಿನ ಬರ್ಗಿಯಲ್ಲಿ ಲೈನ್ಮೇನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಬು ನಾಯ್ಕ(ಬಾಬಣ್ಣ) ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬರ್ಗಿಯ ಕುರಿಗದ್ದೆಯಲ್ಲಿ ನಡೆದೆ.
ಬಾಬು ನಾಯ್ಕ ಮೂಲತಃ ಅಂಕೋಲಾ ತಾಲೂಕಿನ ಬಾವಿಕೇರಿ ನಿವಾಸಿಯಾಗಿದ್ದು, ಇವರು ಕಳೆದ ಅನೇಕ ವರ್ಷಗಳಿಂದ ಬರ್ಗಿಯಲ್ಲಿ ಲೈನ್ಮೇನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಸಹ ಬೆಳಿಗ್ಗೆಯಿಂದ ಬರ್ಗಿಯಲ್ಲಿ ಅನೇಕ ಕಡೆ ವಿದ್ಯುತ್ ಲೈನ್ ದುರಸ್ಥಿ ಮಾಡಿಕೊಂಡಿದ್ದು,ಮಧ್ಯಾಹ್ನ ಒಂದು ಗಂಟೆ ಬಳಿಕ ಬರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರಿಗದ್ದೆ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಗೇರು ಮರವೊಂದಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ..
ಇನ್ನೊಂದು ತಿಂಗಳಲ್ಲಿ ಇವರು ನಿವೃತ್ತಿ ಸಹ ಹೊಂದುವವರಿದ್ದು, ಅತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ
- ವಿನಾಯಕ (ವಿನು) ನಾಯ್ಕ ಅವರಿಗೆ ‘ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ’ ಪ್ರದಾನ
- ಹಬ್ಬದ ಸಂಭ್ರಮದ ಬೆನ್ನಲ್ಲೇ ಸಾವಿನ ಸರಣಿ; ಒಂದೇ ಕುಟುಂಬದ ಮೂವರು ಸೇರಿ ಹಲವರು ಬಲಿ
- ದಾಂಡೇಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಅವ್ಯವಸ್ಥೆ; ಗಬ್ಬು ನಾರುತ್ತಿರುವ ಸ್ವಿಮ್ಮಿಂಗ್ ಪೂಲ್
- ಇಡಗುಂಜಿ ವಿನಾಯಕ ನನ್ನ ಆರಾಧ್ಯ ದೇವರು; ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಧ್ಯೇಯ: ಮಂಕಾಳ ವೈದ್ಯ

