ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಕಾರವಾರ ನಗರಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು,ಈ ವೇಳೆ ಲಂಚ ಪಡೆಯುತ್ತಿದ್ದ ನಗರ ಯೋಜಕ ಸದಸ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ
.

ಶಿವಾನಂದ ತಾಮ್ರೆಣ್ಣನವರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾನೆ‌ ಈತ ಪ್ರಶಾಂತ್ ನಾಯ್ಕ ಎಂಬುವವರಿಂದ 10ಸಾವಿರ ರೂ ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ‌ನಡೆಸಿದ್ದಾರೆ.


ಲೋಕಾಯುಕ್ತ ಎಸ್ಪಿ ಕುಮಾರಚಂದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಇದೀಗ ಲಂಚ ಬಾಕ ಅಧಿಕಾರಿಯನ್ನ ಲೋಕಾಯುಕ್ತ ಅಧಿಕಾರಿಗಳು ತನಿಖೆ‌ ನಡೆಸುತ್ತಿದ್ದಾರೆ.

ಇದನ್ನೂ ಓದಿ