ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕದಂಬ ನೌಕಾನೆಯ ಕುರಿತು ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚಾರಿಗಳಿಗೆ ನೀಡಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) (NIA) ಮಂಗಳವಾರ ಇಬ್ಬರನ್ನು ಬಂಧಿಸಿದೆ.
ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಮತ್ತು ಕಾರವಾರ ತಾಲೂಕಿನ ಮುದಗಾದ ವೇತನ್ ತಾಂಡೇಲ್ ಅವರನ್ನು ಬಂಧಿಸಲಾಗಿದೆ. ಹೈದರಾಬಾದ್ನ ಎನ್ಐಎ ಅಧಿಕಾರಿಗಳ ತಂಡ ಸೋಮವಾರ ಕಾರವಾರದಲ್ಲಿ ತಂಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ರಾತ್ರಿ ತನಕ ಅಗತ್ಯ ದಾಖಲೆಗಳನ್ನು ಪರಿಶೀಲಿಸಿತು. ಬಳಿಕ, ಅವರು ಕಾರವಾರದಲ್ಲಿ ಉಳಿದುಕೊಂಡು, ಮಂಗಳವಾರ ಮುಂಜಾನೆ ಪ್ರತ್ಯೇಕ ತಂಡವನ್ನು ರಚಿಸಿ, ಎರಡು ಕಡೆಗಳಿಂದ ದಾಳಿ ನಡೆಸಿದ್ದಾರೆ.
ಅಂಕೋಲಾದಲ್ಲಿ ಬಂಧಿತನಾದ ಅಕ್ಷಯ ನಾಯ್ಕನನ್ನು ಅಲ್ಲಿಯೇ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಕಾರವಾರಕ್ಕೆ ತರಲಾದ ಇನ್ನೊಬ್ಬ ಆರೋಪಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
2024ರ ಆಗಸ್ಟ್ ತಿಂಗಳಲ್ಲಿ, ನೌಕಾನೆಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ನಂತರ ಅವರಿಗೆ ನೋಟಿಸ್ ನೀಡಿ ಬಿಡುಗಡೆ ಮಾಡಲಾಗಿತ್ತು.ಇದೀಗ ಅದೇ ಪ್ರಕರಣದ ಮುಂದುವರೆದ ತನಿಖೆಯ ಭಾಗವಾಗಿ ಇಬ್ಬರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




