ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ : ಲಾರಿ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಂದೆ,ತಾಯಿ ಜೊತೆ 7 ತಿಂಗಳ ಹಸುಹುಸು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ.
ಅಪಘಾತದಲ್ಲಿ ಪತಿ ಶ್ರೀಕಾಂತ ರೆಡ್ಡಿ(37), ಪತ್ನಿ ಚೈತ್ರಾ (31) ಹಾಗೂ ಶ್ರೀಹಾನ್ (7 ತಿಂಗಳು) ಹಸುಗುಸು ಮೃತ
ದುರ್ದೈವಿಯಾಗಿದ್ದಾರೆ.
ಕೊಪ್ಪಳದಿಂದ ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಕಡೆ ಬರುತ್ತಿದ್ದ ವೇಳೆ ಓವರಟೇಕ್ ಮಾಡಲು ಹೋದ ಲಾರಿ ಚಾಲಕ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನ ಚಿಕಿತ್ಸೆಗಾಗಿ ಯಲ್ಲಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ತಾಯಿ ಮಗು ಇಬ್ಬರೂ ಕೂಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಮೃತಳ ಪತಿ ಶ್ರೀಕಾಂತ ರೆಡ್ಡಿ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಹ ಮೃತಪಟ್ಟಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಇದನ್ನೂ ಓದಿ
- ಅಘನಾಶಿನಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಮತಾ ನಾಯ್ಕಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
- 30 ನಿಮಿಷದಲ್ಲೇ 42 ಗ್ರಾಂ ಚಿನ್ನದ ಮಾಂಗಲ್ಯ ಸರ ಪತ್ತೆ : ಕುಮಟಾ ಪೊಲೀಸರ ಮಿಂಚಿನ ಕಾರ್ಯಚರಣೆ
- ಕಾರವಾರ ಶೈಕ್ಷಣಿಕ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ; ಈ ಬಾರಿ ಗೌರವದ ಗರಿ ಯಾರಿಗೆ?
- ಬರ್ಗಿ ಬಳಿ ಇನೋವಾ ಅಪಘಾತ: ಕಾರಿನಲ್ಲಿದ್ದ 5 ರಾಜ್ಯಗಳ ನಂಬರ್ ಪ್ಲೇಟ್ಗಳ ರಹಸ್ಯವೇನು?

