ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ : ಎದೆ ನೋವು ಕಾಣಿಸಿಕೊಂಡ ಕಾರಣ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿ ವೈದ್ಯರಿಂದ ಸಲಹೆ ಪಡೆದು ಬೈಕ್ ಮೇಲೆ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಬೈಕ್ನಿಂದ ಕುಸಿದು ಬಿದ್ದು ವ್ಯಕ್ತಿ ಓರ್ವ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ನಗರದ ದೇವಿಕರೆ ಬಳಿ ನಡೆದಿದೆ.
ಹನುಮಂತಿಯ ನಿವಾಸಿಯಾಗಿದ್ದ ಪ್ರೇಮಾನಂದ ಗಂಗಾಧರ ತಳಗೇರಿ (25) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಮಧ್ಯಾಹ್ನದ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ.ಬಳಿಕ ಆತ ತಾಯಿ ಬಳಿ ವಿಚಾರವನ್ನ ಹೇಳಿ ಆಸ್ಪತ್ರೆಗೆ ಹೋಗಲು ಹೋರಟಿದ್ದು, ಈ ವೇಳೆ ಮಗನಿಗೆ ಎದೆ ನೋವು ಇರುವ ಕಾರಣ ತಾಯಿ ನಾನು ಸಹ ಜೊತೆಯಲ್ಲೆ ಬರುವುದಾಗಿ ಮಗನಿಗೆ ಹೇಳಿದ್ದಳು ಎನ್ನಲಾಗಿದ್ದು, ಹೀಗಾಗಿ ಆತ ತಾಯಿಯನ್ನು ಸಹ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ.
ಬಳಿಕ ವೈದ್ಯರನ್ನ ಭೇಟಿ ಯಾದ ಪ್ರೇಮಾನಂದ ಬೈಕ್ನಲ್ಲಿ ವಾಪಸ್ ಮನೆಗೆ ಬರುವಾಗ ಏಕಾಏಕಿಯಾಗಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟಿದ್ದಾನೆ.ಇನ್ನೂ ಬೈಕ್ ಹಿಂಬದಿಯಲ್ಲಿದ್ದ ಆತನ ತಾಯಿಗೂ ಸಹ ಗಾಯವಾಗಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ
- ಕರಾವಳಿಯಲ್ಲಿ ಭಾರೀ ಮಳೆ: ನಾಳೆ ಎಲ್ಲೆಲ್ಲಿ ಶಾಲೆ–ಕಾಲೇಜುಗಳಿಗೆ ರಜೆ?
- ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರ ಬದ್ಧ: ಉನ್ನತ ಮಟ್ಟದ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ
- ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ : ಬೈಕ್ ಸವಾರನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು,
- ಮೆಹೆಂದಿ ರಂಗು ಮಾಸುವ ಮುನ್ನವೇ ವಿಧಿಯ ಕ್ರೂರ ಆಟ: ಬೈಕ್ ಸ್ಕಿಡ್ ನವವಧು ಸ್ಥಳದಲ್ಲೇ ಸಾವು, ಪತಿ ಗಂಭೀರ..!

