ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ : ವಿದ್ಯುತ್ ಶಾರ್ಟ ಸರ್ಕ್ಯೂಟ್ ನಿಂದಾಗಿ ಗುಜುರಿ ಅಂಗಡಿಗೆ ಬೆಂಕಿ ಬಿದ್ದು ಲಾರಿ ಸಹಿತ ಗುಜುರಿ ಮಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಗುಣವಂತೆ ಬಳಿ ನಡೆದಿದೆ
ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತು ಉರಿಯುತ್ತಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಯಿಂದ ಹರಸಾಹಸ ಪಡುತ್ತಿದ್ದಾರೆ. ಅದೆಷ್ಟೆ ಪ್ರಯತ್ನ ಪಟ್ಟರು ಸಹ ಬೆಂಕಿ ನಂದಿಸು ಸಾಧ್ಯವಾಗುತ್ತಿಲ್ಲ. ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿರುವುದರಿಂದ ಅಕ್ಕ ಪಕ್ಕದ ಪ್ರದೇಶಕ್ಕೂ ಬೆಂಕಿ ಆವರಿಸಿಕೊಂಡಿದೆ.
ಬೆಂಕಿ ನಂದಿಸಲು ಹೆಚ್ಚುವರಿಯಾಗಿ ಭಟ್ಕಳ ಹಾಗೂ ಕುಮಟಾದಿಂದಲ್ಲೂ ಅಗ್ನಿಶಾಮಕ ದಳವನ್ನ ಕರೆಸಿಕೊಳ್ಳಲಾಗಿದೆ. ಈಗಾಗಲೇ ಸ್ಥಳಕ್ಕೆ ಹೊನ್ನಾವರ ಪೊಲೀಸರು ಸಹ ಭೇಟಿ ನೀಡಿದ್ದಾರೆ.ರಾಷ್ಟೀಯ ಹೆದ್ದಾರಿ ಪಕ್ಕದಲ್ಲೇ ಬೆಂಕಿ ಹೊತ್ತಿ ಉರಿಯುತ್ತಿರುವ ಕಾರಣ ಗ್ಯಾಸ್ ಟ್ಯಾಂಕರ್, ಪೆಟ್ರೋಲ್, ಡಿಸೇಲ್ ಟ್ಯಾಂಕರ್ ವಾಹನ ಸಂಚರಿಸದಂತೆ ನೋಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ



