ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ತಾಲೂಕಿನ ಬರ್ಗಿ ಪ್ರೌಢಶಾಲೆಯಲ್ಲಿ ದಿ: 03-02-2025 ರಿಂದ 05-02-2025 ರ ಅವಧಿಯಲ್ಲಿ ನಡೆದ ‘ರಾಷ್ಟ್ರೀಯ ಆವಿಷ್ಕಾರ ಅಭಿಯಾನ’ದ ಅಡಿಯಲ್ಲಿನ ತಾಲೂಕಾ ಮಟ್ಟದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಬರ್ಗಿಯ 9ನೇ ತರಗತಿಯ ವಿದ್ಯಾರ್ಥಿನಿ ಕು. ಸಿಂಚನಾ ಶಿವಾನಂದ ಪಟಗಾರ ಇವಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಮಾರ್ಚ್ :05 ರಂದು ಬಿ.ಆರ್.ಸಿ.ಕೇಂದ್ರ ಕುಮಟಾದಲ್ಲಿ ನಡೆಯಲಿರುವ ಜಿಲ್ಲಾ ಹಂತದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕರಾದ ಎಂ.ಕೆ.ನಾಯ್ಕ ಹಾಗೂ ಶಿಕ್ಷಕ ವೃಂದ, ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಸುರೇಶ ಪಟಗಾರ ಹಾಗೂ ಸದಸ್ಯರುಗಳು ಅಭಿನಂದಿಸಿ, ಆಶೀರ್ವದಿಸಿರುತ್ತಾರೆ.
ಇದನ್ನೂ ಓದಿ
- ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು; ಕುಮಟಾ ಕಡ್ಲೆ ಸಮುದ್ರ ತೀರದಲ್ಲಿ ದುರ್ಘಟನೆ
- ಮಾರಿ ಹೊರೆ ಸ್ಥಳಾಂತರ ವೇಳೆ ಗಲಾಟೆ; ವ್ಯಕ್ತಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ, ಕುಮಟಾ ಠಾಣೆಯಲ್ಲಿ ಪ್ರಕರಣ
- ಹೊನ್ನಾವರ ಬಂಗಾರದ ಆಭರಣ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹17.08 ಲಕ್ಷ ಮೌಲ್ಯದ ಚಿನ್ನ ಜಪ್ತಿ, ಇಬ್ಬರ ಬಂಧನ
- ಲಾರಿ ಕಳ್ಳತನ ಪ್ರಕರಣದ ಬೆಳಗಾವಿ ಮೂಲದ ಆರೋಪಿ ಬಂಧನ; ಹಳಿಯಾಳ ಪೊಲೀಸರ ಕಾರ್ಯಾಚರಣೆ

