ಸುದ್ದಿಬಿಂದು ಬ್ಯೂರೋ ವರದಿ
ಸಿದ್ದಾಪುರ : ಮಾಧ್ಯಮ ಕ್ಷೇತ್ರದಲ್ಲಿ ಕಳೆದ‌ ಎರಡು ದಶಕದಿಂದ‌ ಕಾರ್ಯ‌ ನಿರ್ವಹಿಸುತ್ತಿದ್ದ ಶಿವಶಂಕರ್ ಕೋಲಸಿರ್ಸಿ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರಿಗೆ 44ವಯಸ್ಸಾಗಿದ್ದು, ಅವರು Tv-9, ನ್ಯೂಸ್ ನಲ್ಲಿ ಕೆಲ‌ ವರ್ಷಗಳ‌ ಕಾಲ ಉತ್ತರಕನ್ನಡ ಜಿಲ್ಲಾ ವರದಿಗಾರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕನ್ನಡ ಜನಾಂತರಂಗ,ಕನ್ನಡ ಪ್ರಭಾ, ಕರಾವಳಿ ಮುಂಜಾವು ಸೇರಿದಂತೆ ಅನೇಕ ಮಾಧ್ಯಮದಲ್ಲಿ ಕಾರ್ಯ‌ ನಿರ್ವಹಿಸಿದ್ದರು, ಸದ್ಯ ರಾಜ್ ನ್ಯೂಸ್ ‌ನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.ನಿನ್ನೆ ಸಹ ವರದಿಗಾರಿಕೆಗೆ ತೆರಳಿದ್ದರು.‌ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡು ಇರಲಿಲ್ಲ.ವರದಿಗಾರಿಕೆ ಜೊತೆಗೆ ಬ್ಯಾಂಕ್ ಆಪ್ ಬರೋಡಾದಲ್ಲಿ ಆರ್ಥಿಕ ಸಾಕ್ಷರತೆ ಕೇಂದ್ರದ ಸಮಾಲೋಚಕರಾಗಿ ಕೂಡ ಕೆಲಸ ಮಾಡುತ್ತಿದ್ದರು..

ತಡರಾತ್ರಿ ಏಕಾಏಕಿಯಾಗಿ ಎದೆ ನೋವು ಕಾಣಿಸಿಕೊಂಡಿದ್ದು,ತಕ್ಷಣ ಅವರನ್ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಮುನ್ನವೆ ಶಿವಶಂಕರ್ ನಿಧನರಾಗಿದ್ದಾರೆ.ಮೃತರು ಪತ್ನಿ ಹಾಗೂ ಅಪಾರ‌ ಬಂಧು ಬಳಗವನ್ನ ಅಗಲಿದ್ದಾರೆ.ಮೃತರ ನಿಧಕ್ಕೆ ಸ್ಥಳೀಯ ವರದಿಗಾರರು ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ. ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅವರು ಸಂತಾಪ‌ ಸೂಚಿಸಿದ್ದಾರೆ.

ಇದನ್ನೂ ಓದಿ