ಸುದ್ದಿಬಿಂದು ಬ್ಯೂರೋ ವರದಿ
ಹುಬ್ಬಳ್ಳಿ : ಶಾಲೆಯ ವಿದ್ಯಾರ್ಥಿಗಳ ಮೇಲೆನೆ ಅತ್ಯಾಚಾರ ಮಾಡಿ ತಲೆ ಮರೆಸಿಕೊಂಡಿದ್ದ ಕಾಮುಕ ಶಿಕ್ಷಕನ್ನ ಇದೀಗ ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ.

ಮೈಸೂರಿನ ಎಚ್ ಡಿ ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದ ಶಾಲೆಯಲ್ಲಿ ಶಿಕ್ಷಕನಾಗಿದ್ದ ಗಿರೀಶ್ ಎಂಬಾತ ಶಾಲಾ ವಿದ್ಯಾರ್ಥಿಗಳಿಗೆ ನಿದ್ರೆ ಮಾತ್ರೆಯನ್ನ ನೀಡಿ ಲೈಂಗಿಕ ದೌರ್ಜನ್ಯ ಎಸೆಗಿದ್ದ , ಈತನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಕಾಮುಕ ಶಿಕ್ಷಕ ಅಲ್ಲಿಂದ ನಾಪತ್ತೆಯಾಗಿದ್ದ, ಆತನ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡವನ್ನ ರಚನೆ ಮಾಡಲಾಗಿತ್ತು. ಈತ ಪೊಲೀಸ್ ಬಂಧನದಿಂದ ತಪ್ಪಸಿಕೊಂಡು ಹುಬ್ಬಳ್ಳಿಯಲ್ಲಿ ಅವಿತ್ತುಕೊಂಡಿದ್ದ, ಆತನ ಬಂಧನಕ್ಕಾಗಿ ಸಾಕಷ್ಟು ಹುಡುಕಾಟ ನಡೆಸಲಾಗಿತ್ತು.

ಕ್ರಿಮಿ ಕಾಮುಕ ಶಿಕ್ಷಕ ಗುರುತು ಪತ್ತೆಯಾಗದಂತೆ ದಾಡಿ ಬಿಟ್ಟುಕೊಂಡು, ಒಂದು ರೀತಿಯಲ್ಲಿ ಮಾನಸಿಕ ಅಸ್ವಸ್ಥನಂತೆ ಕಾಣುವ ಹಾಗೆ ಓಡಾಡುತ್ತಿದ್ದ ಎನ್ನಲಾಗಿದೆ. ಹೆಚ್ ಡಿ ಕೋಟೆ ಸರ್ಕಲ್ ಇನ್ಸ್‌ಪೆಕ್ಟರ್ ಶಬ್ಬಿರ್ ಅಹ್ಮದ್, ಕ್ರೈಂ ಬೀರಪ್ಪ, ಸೇರಿದಂತೆ ಪೊಲೀಸ್ ಸಿಬ್ಬಂದಿ ಗಳು ಇದೀಗ ಹುಬ್ಬಳ್ಳಿಯಲ್ಲಿ ಪತ್ತೆ ಹಚ್ಚಿದ್ದಾರೆ.ಬಂಧಿತ ಕಾಮುಕ ಶಿಕ್ಷಕನಿಗೆ .ಹುಬ್ಬಳ್ಳಿಯಿಂದ ಹೆಚ್ ಡಿ ಕೋಟೆಗೆ ಕರೆದೊಯ್ಯಲಾಗುತ್ತಿದೆ. ಇಂತಹ ಕ್ರಿಮಿ ಕಾಮುಕ ಶಿಕ್ಷಕರಿಂದ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕಿದೆ. ಸರಕಾರ ಕೂಡ ಇಂತಹ ಕೆಟ್ಟ ಹುಳುಗಳು ಶಾಲೆಗಳಲ್ಲಿ ಇರುವುದು ಕಂಡು ಬಂದಲ್ಲಿ ಮುಚ್ಚಿತವಾಗಿ ಕ್ರಮ ಜರುಗಿಸಬೇಕು ಎನ್ನುವ ಒತ್ರಾಯ ಈ ಘಟನೆಯ ಬಳಿಕ ರಾಜ್ಯಾದ್ಯಂತ ಕೇಳಿ ಬರುತ್ತಿದೆ..

ಇದನ್ನೂ ಓದಿ