ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಲು ಮತ್ತು ಎಸ್.ಎಸ್.ಎಲ್.ಸಿ ವಿಜ್ಞಾನ ಪರೀಕ್ಷೆಯಲ್ಲಿ ಸುಲಭವಾಗಿ ಚಿತ್ರಗಳನ್ನು ಬಿಡಿಸಿ ಹೆಚ್ಚಿನ ಅಂಕ ಗಳಿಸಲು ಸಹಾಯಕವಾಗುವ ದೃಷ್ಟಿಯಿಂದ ಸರಕಾರಿ ಪ್ರೌಢಶಾಲೆ ಬರ್ಗಿಯಲ್ಲಿ ವಿಜ್ಞಾನ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ವಿಜ್ಞಾನ ಶಿಕ್ಷಕ ಪಿ.ಎನ್.ನಾಯ್ಕ ಕಾರ್ಯಕ್ರಮವನ್ನು ಆಯೋಜಿಸಿ ಬಹುಮಾನದ ಪ್ರಾಯೋಜಕತ್ವವನ್ನು ವಹಿಸಿದ್ದರು. ಈ ಸ್ಪರ್ಧೆಯಲ್ಲಿ‌ ಅಶ್ವಿನಿ ವಿನಾಯಕ ಹರಿಕಾಂತ ಪ್ರಥಮ,ಧನ್ಯಶ್ರೀ ಜಯರಾಮ ಪಟಗಾರ ದ್ವಿತೀಯ,ಮನೋಜ ವಿ. ಪಟಗಾರ ತೃತೀಯ ಸ್ಥಾನ ಪಡೆದಿದ್ದಾರೆ. ಹಾಗೂ ನವ್ಯಾ ಬಾಬಾನಂದ ಹರಿಕಂತ್ರ ಮತ್ತು ನಂದನ ಕಮಲಾಕರ ಪಟಗಾರ ಸಮಾಧಾನಕರ ಬಹುಮಾನ ಪಡೆದಿರುತ್ತಾರೆ.

ಬಹುಮಾನ ವಿಜೇತ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಮುಖ್ಯಾಧ್ಯಾಪಕ ಎಂ.ಕೆ.ನಾಯ್ಕ ಮತ್ತು ಶಿಕ್ಷಕವೃಂದದವರು ಹಾಗೂ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಸುರೇಶ ಪಟಗಾರ ಮತ್ತು ಎಲ್ಲಾ ಸದಸ್ಯರು ಅಭಿನಂದಿಸಿದ್ದಾರೆ.

ಇದನ್ನೂ ಓದಿ