ಬೆಂಗಳೂರು: ಪ್ರಸ್ತುತ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ 2025-26ನೇ ಸಾಲಿನ ಬಜೆಟ್ ಮಂಡನೆಯ ಸಮಯದಲ್ಲಿ, ಮಾಧ್ಯಮ ಮಾನ್ಯತೆ ಪಡೆದ ಒಟ್ಟು 2500 ಪತ್ರಕರ್ತರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5ಲಕ್ಷ ರೂಪಾಯಿಯಷ್ಟು ನಗದು ರಹಿತ ಚಿಕಿತ್ಸೆ ನೀಡುವ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಘೋಷಿಸಿದರು.
ಅದೇ ರೀತಿಯಲ್ಲಿ, ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡುವ ರೂ. 12,000 ಹಣವನ್ನು ರೂ. 15,000ಕ್ಕೆ ಹೆಚ್ಚಿಸಲಾಗುವುದು ಮತ್ತು ಕುಟುಂಬ ಮಾಶಾಸನವನ್ನು ರೂ. 6,000 ರಿಂದ ರೂ. 7,000ಕ್ಕೆ ಹೆಚ್ಚಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ