ಸುದ್ದಿಬಿಂದು ಬ್ಯೂರೋ ವರದಿ
ಮೈಸೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಂದ ಹೊರಬಂದ ನಟ ದರ್ಶನ್ ಹತ್ತು ತಿಂಗಳ ನಂತರ ಮತ್ತೆ ಬಣ್ಣ ಹಚ್ಚಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದ ಕಾರಣ ಅರ್ಧಕ್ಕೆ ನಿಂತು ಹೋಗಿದ್ದ ‘ಡೆವಿಲ್’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಇಂದಿನಿಂದ ಶುರುವಾಗಿದೆ. ಈ ಹಿನ್ನೆಲೆ ಚಿತ್ರೀಕರಣ ಆರಂಭಕ್ಕೂ ಮುನ್ನ ದರ್ಶನ್ ದೇವರ ಮೊರೆ ಹೊಗಿದ್ದು, ರೇಂಜ್ ರೋವರ್ ಕಾರಿನಲ್ಲಿ ಚಿತ್ರಿಕರಣ ಸೆಟ್ ಗೆ ಗ್ರಾಂಡ್ ಎಂಟ್ರಿ ಕೊಟ್ಟಿದ್ದಾರೆ.‌

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿ ಹೊರಬಂದ ಬಳಿಕ ಮೈಸೂರಿನಲ್ಲಿ ನಟ ದರ್ಶನ್ ದಿ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಶೂಟಿಂಗ್‌ಗೂ ಮುನ್ನ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಚಾಮುಂಡಿ ಬೆಟ್ಟದಿಂದ ನೇರವಾಗಿ ಸರ್ಕಾರಿ ಅತಿಥಿ ಗೃಹಕ್ಕೆ ದರ್ಶನ್ ಆಗಮಿಸಿದ್ರು. ಮಾರ್ಚ್ 12ರಿಂದ 15ರವರೆಗೆ ಶೂಟಿಂಗ್‌ಗೆ ಅನುಮತಿ ಸಿಕ್ಕಿದೆ. ಇಂದಿನಿಂದ ಮಾ.14ರ ವರೆಗೆ ಸರ್ಕಾರಿ ಅತಿಥಿ ಗೃಹದಲ್ಲಿ ‘ಡೆವಿಲ್’ ಶೂಟಿಂಗ್ ನಡೆಯಲಿದ್ದು, ಮಾ.15ರಂದು ಲಲಿತಮಹಲ್ ಪ್ಯಾಲೇಸ್‌ನಲ್ಲಿ ಶೂಟಿಂಗ್ ನಡೆಯಲಿದೆ‌.

ಸರ್ಕಾರಿ ಅಥಿತಿ ಗೃಹದಲ್ಲಿ ಶೂಟಿಂಗ್ ನಡೆಯುತ್ತಿರೋ ಹಿನ್ನಲೆ ಬಿಗಿ ಭದ್ರತೆಯನ್ನ ಆಯೋಜನೆ ಮಾಡಲಾಗಿದೆ. ಹತ್ತು ತಿಂಗಳ ಬಳಿಕ ನಟ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿರೋ ಕಾರಣ ಅಭಿಮಾನಿಗಳು, ಸಾರ್ವಜನಿಕರಿಂದ ಚಿತ್ರೀಕರಣಕ್ಕೆ ತೊಂದರೆ ಆಗಬಹುದು ಅನ್ನೋ ಕಾರಣಕ್ಕೆ ಕಿರಿಕಿರಿ ತಪ್ಪಿಸುವ ಉದ್ದೇಶದಿಂದ ಸರ್ಕಾರಿ ಅಥಿತಿ ಗೃಹಕ್ಕೆ ಕ್ಕೆ ಸಂಪರ್ಕ ಮಾಡುವ ಮೂರು ಪ್ರಮುಖ ದ್ವಾರಗಳಲ್ಲಿ ಬೌನ್ಸರ್ ಗಳ ನ್ನ ಚಿತ್ರತಂಡ ನಿಯೋಜನೆ ಮಾಡಿಕೊಂಡಿದೆ. ಇದಲ್ಲದೆ ಪೊಲೀಸ್ ಇಲಾಖೆಯಿಂದ ಚಿತ್ರೀಕರಣಕ್ಕೆ ಪೊಲೀಸ್ ಬಂದೂಬಸ್ತ್ ಅನ್ನ ಸುಮಾರು 1.64,785 ರೂಪಾಯಿಗಳ ಹಣ ನೀಡಿ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಿಕೊಂಡಿದ್ದು ಶೂಟಿಂಗ್ ನಡೆಯುವ 5 ದಿನವೂ ಪಾಳಿಯಂತೆ ಒಟ್ಟು 32 ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನೇಮಿಸಿದೆ.

ಬರೋಬ್ಬರಿ ಹತ್ತು ತಿಂಗಳ ಬಳಿ ನಟದರ್ಶನ್ ಅಭಿನಯದ ದಿ ಡೆವಿಲ್ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಸೆಟ್ಟೇರುತ್ತಿದೆ. ಹತ್ಯೆ ಕೇಸ್ ನಲ್ಲಿ ಜೈಲಿನಿಂದ ಬೇಲ್ ಮೇಲ್ ಬಂದಿರೋ ನಟ ದರ್ಶನ್ ಚಿತ್ರೀಕರಣಲ್ಲಿ ಭಾಗಿಯಾಗಿದ್ದು ಅಭಿಮಾನಿಗಳಲ್ಲಿ ಉತ್ಸುಕತೆಯನ್ನ ಹೆಚ್ಚಿಸಿದೆ.

ಇದನ್ನೂ ಓದಿ