ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಅಕ್ರಮ ಗಾಂಜಾ ಮಾದಕ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಓರ್ವ ವ್ಯಕ್ತಿಯನ್ನ ಬಂಧನ ಮಾಡಿರುವ ಘಟನೆ ಶಿರಸಿ ನಗರದಲ್ಲಿ ನಡೆದಿದೆ.

ಶಿರಸಿ ನಗರದ ಮುಸ್ಲಿಂಗಲ್ಲಿಯ ನಿವಾಸಿಯಾದ ಅಜಾಜ್ ತಂದೆ ಮಕ್ಬೂಲ್ ಅಹ್ಮದ್ ಶೇಖ್ ಎಂಬಾತ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿಕೊಂಡು ಬಂದು ಶಿರಸಿ ನಗರದ ಕಲ್ಕುಣಿ ರಸ್ತೆಯ ಕಟ್ಟಿಗೆ ಡಿಪೋ ಬಳಿ ಮಾರಾಟ ಮಾಡುತ್ತಿದ್ದಾಗ ಶಿರಸಿ ನಗರ ಪೊಲೀಸರು ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಆತನಿಂದ 15000- ರೂ ಮೌಲ್ಯದ 154 ಗ್ರಾಂ ಗಾಂಜಾ ಚಿಲುಮೆ ಹಾಗೂ ಪ್ಲಾಸ್ಟಿಕ್ ಕವರ್ ಗಳು, ಡಿಜಿಟಲ್ ತೂಕದ ಯಂತ್ರ, 1800- ರೂ ನಗದು, ಕೃತ್ಯಕ್ಕೆ ಬಳಸಲಾದ ಹೀರೊ ಕಂಪನಿಯ ಸ್ಪ್ಲೆಂಡರ್ ಬೈಕ್ ವಶಕ್ಕೆ ಪಡೆಯಲಾಗಿದೆ.
ಶಿರಸಿ ನಗರ ಪೊಲೀಸ್ ಠಾಣೆ ಗುನ್ನೆ ನಂ 26/2025 ಕಲಂ 8(c) &20 (B) (ii) (a) NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ ನಾರಾಯಣ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ ಕೃಷ್ಣಮೂರ್ತಿ ಹಾಗೂ ಶಿರಸಿ ಉಪವಿಭಾಗದ ಡಿಎಸ್ಪಿ ಶ್ರೀ ಗಣೇಶ ಕೆ.ಎಲ್, ವೃತ್ತ ನಿರೀಕ್ಷಕರಾದ ಶ್ರೀಶಶಿಕಾಂತ ವರ್ಮಾ ಆವರ ಮಾರ್ಗದರ್ಶನದಲ್ಲಿ ಶಿರಸಿ ನಗರ ಠಾಣೆ ಪಿಎಸ್ಐ ನಾಗಪ್ಪ ಬಿ ಹಾಗೂ ಸಿಬ್ಬಂದಿಗಳಾದ ನಾರಾಯಣ ರಾಥೋಡ ಎಎಸ್ಐ, ಹನುಮಂತ ಕಬಾಡಿ, ಸತೀಶ್ ಅಂಬಿಗ,ಸದ್ದಾಂ ಹುಸೇನ್, ಮಲ್ಲಿಕಾರ್ಜುನ ಕುದರಿ, ಚನ್ನಬಸಪ್ಪ ಕ್ಯಾರಕಟ್ಟಿ,ಶಿವಲಿಂಗ ತುಪ್ಪದ, ಪ್ರವೀಣ್ ಎನ್, ರಾಜಶೇಖರ ಅಂಗಡಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ