ಬೆಂಗಳೂರು: ಹನಿಟ್ರಾಪ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನವನ್ನು ಉಂಟುಮಾಡಿದೆ. ಇದಾದ ಬಳಿಕ,ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯೆಂದರೆ ಬಸವರಾಜ್ ಹೊರಟ್ಟಿ ವಿಧಾನ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆನ್ನುವ ರಾಜೀನಾಮೆ ಪತ್ರ ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೈರಲ್ ಆಗಿರುವ ರಾಜೀನಾಮೆ ಪತ್ರದಲ್ಲಿ ಮಾರ್ಚ್ 18 ಎನ್ನುವ ದಿನಾಂಕ ನಮೂದಾಗಿದೆ. ಹಾಗೇ ಪತ್ರದಲ್ಲಿ ಹೊರಟ್ಟಿ ಅವರ ಸಹಿ ಸಹ ಇಲ್ಲ. ಹೀಗಾಗಿ ರಾಜೀನಾಮೆ ಪತ್ರ ಹಲವು ಗೊಂದಲಗಳಿಗೆ ಕಾರಣವಾಗಿದೆ.
ಬಸವರಾಜ್ ಹೊರಟ್ಟಿ ತಮ್ಮ ರಾಜೀನಾಮೆ ಪತ್ರವನ್ನು ವಿಧಾನ ಪರಿಷತ್ ಉಪಾಧ್ಯಕ್ಷ ಪ್ರಣೇಶ್ ಅವರಿಗೆ ಕಳುಹಿಸಿ, ಏಪ್ರಿಲ್ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ,ಅಧ್ಯಕ್ಷ ಸ್ಥಾನದಿಂದ ಅವರನ್ನು ಬಿಡುಗಡೆ ಮಾಡಲು ಕೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯರ ವರ್ತನೆ ಸಮರ್ಪಕವಾಗಿಲ್ಲ. ಆದ್ದರಿಂದ, ಅವರು ಇಂದು ಬೆಳಿಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ವಿಧಾನ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಈ ನಂತರ, ಅವರು ತಮ್ಮ ರಾಜೀನಾಮೆ ಪತ್ರವನ್ನು ಉಪಾಧ್ಯಕ್ಷರಿಗೆ ಕಳುಹಿಸಿದ್ದಾರೆ.
ಇದನ್ನೂ ಓದಿ
- School Holiday/ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂನ್ 1 ರಿಂದ 30ರ ತನಕ ಈ ಸರಕಾರದಿಂದ ಅಧಿಕೃತ ರಜೆ ಘೋಷಣೆ
- ಬೆಂಗಳೂರಿಗೆ ಒಲಿದ ಐಪಿಎಲ್ 2026 ಮುಕುಟ: ಗುಜರಾತ್ ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆದ RCB!
- ಕರಾವಳಿಯಲ್ಲಿ ಜೂನ್ 1ರಿಂದ 61 ದಿನ ಯಾಂತ್ರೀಕೃತ ಮೀನುಗಾರಿಕೆ ಸಂಪೂರ್ಣ ನಿಷೇಧ
- ಹೊನ್ನಾವರದಲ್ಲಿ ಆರ್ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಓವರ್ಲೋಡ್ ಸಾಗಿಸುತ್ತಿದ್ದ 17ಲಾರಿ ವಶಕ್ಕೆ
- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ? ಡಿಕೆಶಿ ಒಲವು; ಕಾಂಗ್ರೆಸ್ನಲ್ಲಿ ಶುರುವಾಯ್ತು ಹೊಸ ಲೆಕ್ಕಾಚಾರ..!

