ಸುದ್ದಿಬಿಂದು ಬ್ಯೂರೋ ವರದಿ suddi bindu Digital News
ಹಾವೇರಿ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಳಿಯನ ತನ್ನ ಮಾವನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ.
ಶಬ್ಬೀರ ಅಹ್ಮದ್ ಸಾಗರ (40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ನೌಶಾದ್ ಕುಪ್ಪೇಲೂರು ಚಾಕು ಇರಿದು ಮಾವನನ್ನ ಕೊಲೆ ಮಾಡಿದರುವ ಆರೋಪಿಯಾಗಿದ್ದಾನೆ. ಕೌಟುಂಬಿಕ ಕಲಹದಲ್ಲಿ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ.
ಸ್ಥಳಕ್ಕೆ ಹಂಸಭಾವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ನೌಶಾದ್ ನನ್ನ ವಶಕ್ಕೆ ಪಡೆದುಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಇದನ್ನೂ ಓದಿ