ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ನಗರದ ಇಎಸ್ಐ ಆಸ್ಪತ್ರೆಯ ಆವರಣದಲ್ಲಿ ಕಾರ್ಮಿಕ ನೋರ್ವನ ಮೇಲೆ ಮಂಗವೊಂದು ದಾಳಿ ನಡೆಸಿದ್ದು, ಆತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇಎಸ್ಐ ಆಸ್ಪತ್ರೆಯ ಆವರಣದಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತನ್ನ, ಕೆಲಸ ಮುಗಿಸಿ ಮನೆಗೆ ವಾಪಸ್ ಆಗಬೇಕು ಎನ್ನುವ ವೇಳೆ ಕಾರ್ಮಿಕನಾದ ಅಂಬೇವಾಡಿಯ ನವಗ್ರಾಮದ ನಿವಾಸಿ ಪ್ರವೀಣ್ ವೆಂಕಟೇಶ ವಾಸಂದರ ಎಂಬುವವರ ಮೇಲೆ ಮಂಗ ದಾಳಿ ನಡೆಸಿದ ಮಂಗ ಆತನ ಕಾಲಿಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ.ಮಂಗನ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ಪ್ರವೀಣ್ ಅವರನ್ನ ತಕ್ಷಣ ಇಎಸ್ಐ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಂಗನ ದಾಳಿಗೆ ಒಳಗಾಗಿರುವ ಪ್ರವೀಣ ಕುಟುಂಬಕ್ಕೆಅರಣ್ಯ ಇಲಾಖೆಯಿಂದ ಪರಿಹಾರ ನೀಡುವುದರ ಜೊತೆಗೆ ಜನರಿಗೆ ಕಾಟ ನೀಡುತ್ತಿರುವ ಮಂಗಗಳನ್ನ ಹಿಡಿದು ಬೇರೆ ಕಡೆ ಬಿಡುವ ಕೆಲಸ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ
- ದಿಕ್ಕು ತಪ್ಪಿದ ರಾಜ್ಯ ಬಿಜೆಪಿಗೆ (BJP) ಸಂಘ ಪರಿವಾರದ ಹೊಸ ಪ್ಲ್ಯಾನ್?
- ಸುಚಿತ್ರ ಸೌಂದರ್ಯಕ್ಕೆ ಸೋತ ಜ್ಯೋತಿಷಿ..? ಮೊದಲ ಭೇಟಿಯಲ್ಲೇ 35 ಸಾವಿರ ಸುರಿದ ಕಮಲಾಕರ ಭಟ್..!
- ಸುಚಿತ್ರಾ ಯಾರು? ಸುರೇಖಾ ಯಾರು? ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಸ್ಫೋಟಕ ಸತ್ಯಗಳು ಒಂದೊಂದಾಗಿ ಬಹಿರಂಗ!
- ರಾಜ್ಯವನ್ನೇ ಬೆಚ್ಚಿಬೀಳಿಸಿದ ‘ರೀಲ್ಸ್ ರಾಣಿ’ ಸಿದ್ದಾಪುರದ ಸುಂದರಿ ಕಥೆ
.


