ಸುದ್ದಿಬಿಂದು ಬ್ಯೂರೋ ವರದಿ
ನವದೆಹಲಿ : ಕರ್ನಾಟಕ ರಾಜ್ಯದ ಸಾಮಾನ್ಯ ಜನತೆ ಬೆಲೆಯ ಏರಿಕೆಯಿಂದ ನಲುಗಿದ್ದಾರೆ. ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾದ ನಂತರ, ಕೇಂದ್ರ ಸರ್ಕಾರವು ಮತ್ತೊಮ್ಮೆ ದೇಶದ ಜನತೆಗೆ ಆಘಾತ ನೀಡಿದೆ. ಎಲ್ಪಿಜಿ ಅನಿಲ ಸಿಲಿಂಡರ್ ಬೆಲೆ ಪತ್ತನೆಯಾಗಿ ಐವತ್ತು ರೂಪಾಯಿಗಳಷ್ಟು ಹೆಚ್ಚಳವಾಗಿದೆ ಎಂದು ಘೋಷಿಸಿದೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಅವರು ಈ ಮಾಹಿತಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಬೆಲೆ ಏರಿಕೆ ಉಜ್ವಲಾ ಹಾಗೂ ನಾನ್ ಉಜ್ವಲಾ ಗ್ರಾಹಕರಿಗೆ ಕೂಡ ಅನ್ವಯವಾಗುತ್ತದೆ.
ಹೀಗಾಗಿ ಇನ್ನು ಮುಂದೆ ಉಜ್ವಲಾ ಯೋಜನೆಯ ಅಡಿಯಲ್ಲಿ 14.2 ಕೆಜಿ ಸಿಲಿಂಡರ್ಗಾಗಿ 503 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಇತರೆ ಗ್ರಾಹಕರು 853 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಈ ಬೆಲೆ ಏರಿಕೆಯಿಂದ ಗ್ರಾಹಕರಿಗೆ ಮತ್ತೆ ಸಿಲಿಂಡರ್ಗಳ ಬೆಲೆ ಏರಿಕೆ ಆಗಿರುವುದು ಜನತೆಗೆ ಮತ್ತಷ್ಟು ಬಿಸಿಯಾಗಿದೆ.
ಇದನ್ನೂ ಓದಿ
- ಮೂರು ವರ್ಷದಲ್ಲೇ ಜನಪ್ರಿಯ ನಾಯಕನಾಗಿ ಹೊರಹೊಮ್ಮಿದ ಮಂಕಾಳ್ ವೈದ್ಯ
- ಮೊರಬಾದಲ್ಲಿ ಭಾರೀ ಗಾಳಿಗೆ ತೆಂಗಿನ ಮರ ಬಿದ್ದು ಮನೆ ಜಖಂ: ಪ್ರಾಣಾಪಾಯದಿಂದ ಪಾರು
- ಕರಾವಳಿಯ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ: ಡಿಕೆಶಿ ಸಚಿವ ಸಂಪುಟದಲ್ಲಿ ಮಾಂಕಾಳ ವೈದ್ಯರಿಗೆ ಹೊಸ ಜವಾಬ್ದಾರಿ..!
- 11 ಮಂದಿಯ ದುರಂತದ ಸೂತಕದಲ್ಲೂ ಬಿಜೆಪಿ ರಾಜಕೀಯ; ಕಾಂಗ್ರೇಸ ಜಿಲ್ಲಾ ವಕ್ತಾರ ಪ್ರಸನ್ನ ನಾಯ್ಕ ಆಕ್ರೋಶ

