ಸುದ್ದಿಬಿಂದು ಬ್ಯೂರೋ ವರದಿ Suddibindu Digital News
ಯಾದಗಿರಿ : ಗಾಳಿ ಮಳೆಯಿಂದಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಊರಿಗೆ ಬೆಂಕಿ ಬಿದ್ದ ಘಟನೆ‌ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.

ಇಂದು ಸಂಜೆ ವೇಳೆ ಭಾರಿ ಗಾಳಿ ಸಹಿ ಮಳೆ‌ ಉಂಟಾಗಿದ್ದು, ಗಾಳಿ‌‌ ಮಳೆಗೆ ಮರವೊಂದಕ್ಕೆ ವಿದ್ಯುತ್ ವೈಯರ್ ತಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೀದಿ ದೀಪದ ಕಂಬ ಹಾಗೂ ಮನೆಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ.ಮನೆಗಳಲ್ಲಿ ಹಾಗೂ ಬೀದಿಗಳಲ್ಲಿನ ವಿದ್ಯುತ್ ಕಂಬಗಳಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆ ಹಾಗೂ ಬೀದಿಗಳಲ್ಲಿದ್ದ ಜನ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ತಕ್ಷಣ ಜೆಸ್ಕಾಂಗೆ ಮಾಹಿತಿ‌ ನೀಡಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಯಿತು. ಇದರಿಂದಾಗಿ ಗ್ರಾಮದಲ್ಲಿ ಬಹುದೊಡ್ಡ ದುರಂತ ತಪ್ಪಿದೆ. ವಿದ್ಯುತ್ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಾಣ ಉಳಿಸಿಕೊಳ್ಳು ಓಡುವಾಗ ಅನೇಕರು ಬಿದ್ದು ಗಾಯ ಮಾಡಿಕೊಂಡಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ತಕ್ಷಣ ಸುರಪುರ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ