ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ:ಹಿಂದೂ ಸಂಘಟನೆ ಕಾರ್ಯಕರ್ತನ ಮೇಲೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಹಲ್ಲೆ ಮಾಡಿರುವುದಾಗಿ ಆರೋಪಿಸಿ ಹಿಂದೂ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಟ್ಕಳದಲ್ಲಿ ರಾತ್ರೋ ರಾತ್ರಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ…
ಭಟ್ಕಳದ ಹನುಮಾನ್ ನಗರದ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀನಿವಾಸ್ ನಾಯ್ಕ ಎಂಬುವವರ ಮೇಲೆ ನಿನ್ನೆ (ಮಂಗಳವಾರ) ಶಿರಸಿಯಲ್ಲಿ ರೌಡಿ ಶೀಟರ್ಗಳ ಪರೇಡ್ ವೇಳೆ ಎಸ್ಪಿ ಹಲ್ಲೆ ಮಾಡಿರುವುದಾಗಿ ಆರೋಪಿಸಿ ಶ್ರೀನಿವಾಸ ನಾಯ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುದ್ದಿ ತಿಳಿದ ಹಿಂದೂ ಪರ ಸಂಘಟನೆಗಳು,ವಿಶ್ವ ಹಿಂದೂ ಪರಿಷತ್, ಬಿಜೆಪಿ ಕಾರ್ಯಕರ್ತರು ಸೇರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಭಟ್ಕಳದಲ್ಲಿ ಆಟೋ ಚಾಲಕನಾಗಿ ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಶ್ರೀನಿವಾಸ ನಾಯ್ಕ ಅವರನ್ನ ಎಸ್ಪಿ ಅವರು ನಿನ್ನೆ ಭಟ್ಕಳದಿಂದ ಕರೆಯಿಸಿ ಶಿರಸಿಯ ನಗರ ಠಾಣೆಗೆ ಕರೆಸಿ ಹೊಡೆದಿರುವ ಬಗ್ಗೆ ಶ್ರೀನಿವಾಸ ನಾಯ್ಕ ಆರೋಪಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಎಸ್ಪಿ ಆಗಮಿಸಿ ಕ್ಷಮೆ ಕೋರುವಂತೆ ಪ್ರತಿಭಟನಾ ನಿರತರು ಒತ್ತಾಯಿಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಸೇರಿದಂತೆ ಹಲವು ಮುಖಂಡರ ಭಾಗಿ ಆಗಿದ್ದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಲಿರುವ ಸಂಸದರು
ಹಿಂದೂ ಹೋರಾಟ ಶ್ರೀನಿವಾಸ ನಾಯ್ಕ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ಹಲ್ಲೆ ಮಾಡಿದ್ದಾರೆನ್ನಲಾಗಿರುವ ಆರೋಪಕ್ಕೆ ಸಂಬಂಧಿಸಿ ಭಟ್ಕಳದಲ್ಲಿ ಹಿಂದೂ ಪರ ಸಂಘಟಕರು ಹಾಗೂ ಬಿಜೆಪಿ ಮುಖಂಡರು,ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಉತ್ತರ ಕನ್ನಡ ಸಂಸದರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆನ್ನಲಾಗಿದೆ.
ಇದನ್ನೂ ಓದಿ