ಸುದ್ದಿಬಿಂದು ಬ್ಯೂರೋ ವರದಿ
ಬನವಾಸಿ : ಉತ್ತರ ಕನ್ನಡ ಜಿಲ್ಲೆಯ ಉತ್ಸವಗಳಲ್ಲಿ ಒಂದಾಗಿರುವ ಕರಾವಳಿ ಉತ್ಸವಕ್ಕೆ ಸರಕಾರದಿಂದ ಐದು ಕೋಟಿ ಹಣ ನೀಡುವುದಾಗಿ ಘೋಷಿಸಿದ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಶೀಘ್ರದಲ್ಲಿ ಉತ್ಸವ ದಿನ ನಿಗದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಹಾಗೂ ಜಿಲ್ಲಾಧಿಕಾರಿಗಳಿಗೆ ಕದಂಬೋತ್ಸವದ ವೇದಿಕೆಯಲ್ಲಿ ಸೂಚನೆ ನೀಡಿದ್ದಾರೆ.
ಸಚಿವರು ಈಗಾಗಲೇ ಕದಂಬ ಉತ್ಸವಕ್ಕೆ ದಿನಾಂಕ ನಿಗದಿ ಮಾಡುವಂತೆ ಸೂಚನೆ ನೀಡಿದ್ದು, ಮೇ 4-ರಿಂದ 8ರ ತನಕ ಐದು ದಿನಗಳ ಕಾಲ ಕಾರವಾರದ ರವೀಂದ್ರನಾಥ್ ಠಾಗೋರ್ ಕಡಲ ತೀರದಲ್ಲಿ ಅದ್ದೂರಿಯಾಗಿ ಕರಾವಳಿ ಉತ್ಸವ ನಡೆಸಲು ತೀರ್ಮಾನಿಸಿರುವುದಾಗಿ ತಿಳಿದು ಬಂದಿದ್ದು, ಅಧಿಕೃತ ಘೋಷಣೆ ಒಂದೆ ಬಾಕಿ ಇದೆ ಎನ್ನಲಾಗಿದೆ.

ಇದನ್ನೂ ಓದಿ