ಸುದ್ದಿಬಿಂದು ಬ್ಯೂರೋ ವರದಿ
ಶಿವಮೊಗ್ಗ: ತೀರ್ಥಹಳ್ಳಿ ನಿವಾಸಿ, ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯೊಬ್ಬನಿಗೆ ಜನಿವಾರ ತೆಗೆಯಬೇಕು ಎನ್ನುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಸಿಬ್ಬಂದಿ ಹಾಗೂ ಅಧಿಕಾರಿಗಳ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಘಟನೆಯ ಬಳಿಕ ತಕ್ಷಣ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವಿಷಯ ಮಾಧ್ಯಮಗಳ ಮೂಲಕ ತಿಳಿದುಬಂದಿದೆ ಎಂದು ಹೇಳಿದರು. ವಿದ್ಯಾರ್ಥಿಗಳೊಂದಿಗೆ ಈ ರೀತಿಯಾಗಿ ವರ್ತಿಸುವುದು ಸರಿಯಲ್ಲ. ಈ ಬಗ್ಗೆ ನಿರ್ದೇಶನ ನೀಡುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ. ಈ ಸಂಬಂಧ ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂದಿದ್ದಾರೆ.
ಇದು ನನ್ನ ಇಲಾಖೆಗೆ ಒಳಪಡುವ ವಿಷಯ ಅಲ್ಲ. ಆದರೆ ಸಂಬಂಧಿತ ಇಲಾಖೆಯೊಂದಿಗೆ ಈ ಬಗ್ಗೆ ಚರ್ಚೆ ಮಾಡುತ್ತೇನೆ. ಈ ಘಟನೆ ನನ್ನ ಜಿಲ್ಲೆಯಲ್ಲಿಯೇ ನಡೆದಿರುವುದರಿಂದ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ. ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವಂತೆ ಕೇಳಿಕೊಳ್ಳುತ್ತೇನೆ ಎಂದರು.
ವಿದ್ಯಾರ್ಗಳ ವಿಚಾರದಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಇದು ಎಲ್ಲಾ ಜಾತಿ ಧರ್ಮಗಳಿಗೆ ಗೌರವ ಇರಬೇಕು. ಸಿಇಟಿ ಸೇರಿದಂತೆ ಯಾವುದೇ ಪರೀಕ್ಷೆಯಲ್ಲಿ ಈ ರೀತಿಯ ಘಟನೆ ನಡೆಯಬಾರದು ಎಂದರು
ಇದನ್ನೂ ಓದಿ