ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ :  ವಾಯುವಿಹಾರಕ್ಕೆ ಹೋಗುತ್ತಿದ್ದ ನಗರ ಸಭೆಯ ಮಾಜಿ ಸದಸ್ಯ ನೋರ್ವನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಇಂದು ಬೆಳ್ಳಂಬೆಳ್ಳಿಗ್ಗೆ ನಗರದ ಬಿಎಸ್‌ಎನ್‌ಎಲ್ ಕಚೇರಿ ಸಮೀಪದಲ್ಲಿ ನಡೆದಿದೆ.

ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆಯ ಮಾಜಿ ಸದಸ್ಯರಾಗಿದ್ದಾರೆ.ಇವರು ಎಂದಿನಂತೆ ಇಂದು ಬೆಳಿಗ್ಗೆ ವಾಯುವಿಹಾರಕ್ಕೆ ಮುಗಿಸಿ ವಾಪಸ್ ಬೈಕ್ ಮೇಲೆ ಮನೆಗೆ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಚಾಕು ಇರಿದ್ದಿದ್ದಾರೆನ್ನಲಾಗಿದೆ. ಇದರಿಂದ‌ ಅವರು ಬೈಕ್‌ನಿಂದ ಕೆಳಗೆ ಬಿದ್ದಿದ್ದು, ತಕ್ಷಣ ಅವರನ್ನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ನೀಡಿವ ಮೊದಲೆ 
ಸತೀಶ್ ಕೋಳಂಕರ್ ಕೊನೆಯುಸಿರೆಳೆದಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಕಾರವಾರ ನಗರ ಠಾಣಾ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

ನನ್ನ ತಂದೆ ಕೊಲೆ ಮಾಡಿದ್ದು ನಿತೇಶ್ ತಾಂಡೆಲ್ : ಮಗಳ ಆರೋಪ
ನಿತೇಶ್ ತಾಂಡೆಲ್ ಹಾಗೂ ದರ್ಶನ ಇಬ್ಬರು ಸೇರಿ ಕೊಲೆ ಮಾಡಿದ್ದಾರೆಂದು ಕೊಲೆಯಾದ ವ್ಯಕ್ತಿಯ ಮಗಳು ಪೂರ್ಣಿಮಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನಾನು ರಕ್ತದಲ್ಲಿ ಬರೆದು ಕೊಡುತ್ತೆನೆ ನನ್ನ ತಂದೆಯ ಕೊಲೆ ಮಾಡಿದ್ದು ಬೇರೆಯಾರು ಅಲ್ಲ ನಿತೇಶ್, ಕಳೆದ 10 ದಿನಗಳ ಹಿಂದೆ ಕಾರವಾರದ ಪ್ರಿಮಿಯರ್ ಹೊಟೇಲ್ ನಲ್ಲಿ ನನ್ನ ತಂದೆಯ ಮೇಲೆ ಹಲ್ಲೆ ಆಗಿತ್ತು, ಆ ದಿನ ನಮ್ಮ ತಂದೆಯ ಮುಖ ಪೂರ್ತಿಯಾಗಿ ಕೆಂಪಗಾಗಿತ್ತು. ಹತ್ತಾರು ಜನ ಒಮ್ಮೆಲೆ ಬಂದು ನನ್ನ ಮೇಲೆ ಹಲ್ಲೆ ಮಾಡಿದ್ರು, ಯಾಕೆ ಎನೂ ಅಂತ ಕಾರಣ ತಿಳಿಸದೆ ಹಲ್ಲೆ ಮಾಡಿದ್ದರು ಅಂತ ಹೇಳಿದ್ದರು, ಇಂದು ಬೆಳಿಗ್ಗೆ ಸ್ನಾನ ಮಾಡಿ ವಾಯು ವಿಹಾರಕ್ಕೆ ಹೊಗಿದ್ದು,  ಆ ಸಂದರ್ಭದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಕೊಲೆ ಮಾಡಿದ್ದು ನಿತೇಶ್ ಎಂಬ ವ್ಯಕ್ತಿಯೆ ಅದರಲ್ಲಿ ಸಂಶಯ ಬೇಡ, ನನ್ನ ತಂದೆ ಮಾಜಿ ನಗರಸಭೆ ಸದಸ್ಉ ಆಗಿದ್ದು ಸಿವಿಲ್ ಗುತ್ತಿಗೆದಾರರಾಗಿದ್ದರು.ನಿತೇಶ್ ಯಾರೂ ಎಂಬುವುದು ನನಗೆ ಪೂರ್ಣ ಮಾಹಿತಿ ಇಲ್ಲ. ನನ್ನ ಮಾಹಿತಿ ಪ್ರಕಾರ ನಿತೇಶ್ ಜೊತೆ ಯಾವುದೇ ವ್ಯವಹಾರ ಇರಲಿಲ್ಲ.
ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಲಾಗಿದೆ.

ಇದನ್ನೂ ಓದಿ