ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ : ಪಹಲ್ಗಾಮ್ನಲ್ಲಿ ಹಿಂದೂಗಳ ನರಮೇಧ ನಡೆದ ಬೆನ್ನಲ್ಲೇ ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ದೇಶ ತೊರೆಯಲು ಕೇಂದ್ರ ಸರ್ಕಾರಗಡುವು ನೀಡಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನೆಲಸಿರುವ 14 ಜನ ಪಾಕಿಸ್ತಾನ ಮೂಲದ ಮಹಿಳೆಯರಿದ್ದು ದೀರ್ಘಾವಧಿ ವೀಸಾ ಇರುವ ಕಾರಣ ಭಟ್ಕಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಈಗಾಗಲೇ ಹಲವು ವರ್ಷದಿಂದ 10 ಮಹಿಳೆಯರು ಪಾಕಿಸ್ತಾನ ಮೂಲದ ಮಹಿಳೆಯರಿದ್ದು ಇವರಲ್ಲಿ ನಾಲ್ಕು ಜನ ಭಾರತದಲ್ಲೇ ಹುಟ್ಟಿದ ಮಕ್ಕಳಿದ್ದಾರೆ. ಪ್ರತಿ ಎರಡು ವರ್ಷಕ್ಕೆ ಒಮ್ಮೆ ಇವರ ವಿಸಾ ನವೀಕರಣವಾಗುತ್ತದೆ. ಇನ್ನು ಈ ಮಹಿಳೆಯರು ಭಾರತದ ಪೌರತ್ವಕ್ಕಾಗಿ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರೂ ಈವರೆಗೂ ಇವರಿಗಾಗಲಿ ಭಾರತದಲ್ಲಿ ಹುಟ್ಟಿದ ಇವರ ಮಕ್ಕಳಿಗೆ ಪೌರತ್ವ ನೀಡಿಲ್ಲ.ಇನ್ನು ಕೇಂದ್ರ ಸರ್ಕಾರ ಪಾಕಿಸ್ತಾನಿ ಪ್ರಜೆಗಳಿಗೆ ಭಾರತ ದೇಶ ತೊರೆಯಲು ಹೇಳಿದ್ದರೂ ದೀರ್ಘಾವಧಿ ವಿಸಾ ಹಾಗೂ ಭಾರತೀಯ ಪುರುಷರನ್ನು ವಿವಾಹವಾಗಿದ್ದರಿಂದ ಸದ್ಯ ಈ ಹದಿನಾಲ್ಕು ಮಹಿಳೆಯರು ಭಟ್ಕಳದಲ್ಲೇ ಇರಲಿದ್ದಾರೆ.
ಇನ್ನು ಕೆಲವು ವರ್ಷದ ಹಿಂದೆ ಬಾಂಗ್ಲಾದ ಮಹಿಳೆ ಸಹ ಗಡಿ ಉಲ್ಲಂಘಿಸಿ ಭಟ್ಕಳಕ್ಕೆ ಬಂದು ಇಲ್ಲಿನ ಯುವಕನನ್ನು ವಿವಾಹವಾಗಿದ್ದು ಈಕೆ ಸದ್ಯ ಜೈಲಿನಲ್ಲಿದ್ದು ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಯುತ್ತಿದೆ. ಇನ್ನು ಭಟ್ಕಳದಲ್ಲಿ 14 ಜನ ಪಾಕಿಸ್ತಾನಿ ಮಹಿಳೆಯರಲ್ಲದೇ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇರುವ ಸಾಧ್ಯತೆ ಇದ್ದು ಈ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ.
ಸದ್ಯ ಕೇಂದ್ರ,ರಾಜ್ಯ ಸರ್ಕಾರದಿಂದಲೂ ಯಾವುದೇ ಮಾಹಿತಿ ಭಾರದ ಹಿನ್ನಲೆಯಲ್ಲಿ ಈ ಮಹಿಳೆಯರು ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದು ,ಯಾವಾಗ ಗಡಿಪಾರಾಗುತ್ತೋ ಎಂಬ ಭಯದಲ್ಲಿದ್ದಾರೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




