ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು:-ರಾಜ್ಯದಲ್ಲಿ ಕರೋನಾ ಹೆಮ್ಮಾರಿ‌ ಮತ್ತೆ ರೀ ಎಂಟ್ರಿ ಕೊಟ್ಟು ಮತ್ತೆ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.ವಿಶ್ವದಾದ್ಯಂತ ಮಹಾಮಾರಿ ಕರೋನಾ ಸೋಂಕು ಮತ್ತೆ ಎಂಟ್ರಿ ಕೊಟ್ಟಿದ್ದು ಕರ್ನಾಟಕದಲ್ಲಿ ಈ ತಿಂಗಳಲ್ಲಿ 33 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು:- ಕೋವಿಡ್ ವೈರಸ್ ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಜಾಗತಿಕ ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲಿ ಪುನಃ ಪ್ರವೇಶಿಸಿದ್ದು, ಈ ತಿಂಗಳು ಕರ್ನಾಟಕದಲ್ಲಿ 33 ಪ್ರಕರಣಗಳು ವರದಿಯಾಗಿವೆ.

ಹೊಸಕೋಟೆಯಲ್ಲಿ ಒಂಬತ್ತು ತಿಂಗಳ ಶಿಶುವಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಸದ್ಯ 16 ಸಕ್ರಿಯ ಪ್ರಕರಣಗಳಿವೆ. ಇತ್ತೀಚೆಗೆ ರಾಜ್ಯದಲ್ಲಿ ಒಟ್ಟು 33 ಪ್ರಕರಣಗಳು ವರದಿಯಾಗಿವೆ.

ಆರೋಗ್ಯ ಇಲಾಖೆ ಕೂಡ ಕೊರೊನಾ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜನರು ಭಯಪಡುವ ಅವಶ್ಯಕತೆ ಇಲ್ಲ, ಪರೀಕ್ಷೆಗೊಳಪಡುವಂತೆ ಸಲಹೆ ನೀಡಲಾಗಿದೆ.

ಹಾಂಗ್ ಕಾಂಗ್, ಸಿಂಗಪೂರ್, ಚೀನಾ ಮತ್ತು ಥೈಲ್ಯಾಂಡ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಕೊರೊನಾ ವೈರಸ್ ರಾಜ್ಯದಲ್ಲಿ ಮತ್ತೆ ತಲೆದೋರಿದೆ. ಭಾರತದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ 257ಕ್ಕೆ ತಲುಪಿದೆ.

ಇದನ್ನೂ ಓದಿ