ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ವಾಹನವೊಂದರಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನ ಸಾಗಾಟ ಮಾಡುತ್ತಿದ್ದ ವೇಳೆ ಶಿರಾಲಿ ಚೆಕ್ ಪೊಸ್ಟ್ ಬಳಿ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಗಳು ಹಾವೇರಿ ಮೂಲದ
ಚೇತನ ನಂದೀಶ ಕಡ್ಲಿ, ಸಂತೋಷ ಧ್ಯಾನಪ್ಪ ಬೋರದ್ ಹಾಗೂ ಗದಗ ನಿವಾಸಿಯಾಗಿರುವ ದುರ್ಗಪ್ಪ ಫಕ್ಕೀರಪ್ಪ ಛಲವಾದಿ ಎಂದು ಗುರುತಿಸಲಾಗಿದೆ..ಬಂಧಿತ ಆರೋಪಿಗಳು ಅಕ್ರಮ ಜಾನುವಾರುಗಳನ್ನ ಹೊನ್ನಾವರ ಕಡೆಯಿಂದ ಭಟ್ಕಳದ ಕಡೆಗೆ ಯಾವುದೇ ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಕಟ್ಟಿ ವಧೆ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದು, ಈ ವೇಳೆ ಪೊಲೀಸರು ತಪಾಸಣೆ ಮಾಡುವ ಸಮಯದಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಕೊಂಡಿದ್ದಾರೆ.
ಶಿರಾಲಿ ಚೆಕ್ಪೋಸ್ಟ್ ನಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪಿ.ಎಸ್.ಐ ಭರಮಪ್ಪ ಬೆಳಗಲಿ ವಾಹನ ಸಮೇತ ವಶಕ್ಕೆ ಪಡೆದು ಸುಮಾರು 5.70,000, ಲಕ್ಷ ಮೌಲ್ಯದ19 ಜಾನುವಾರುಗಳನ್ನು ರಕ್ಷಿಸಿದ್ದಾರೆ..
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ


