ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಬಿಜೆಪಿ ಪಕ್ಷದಿಂದ ಬೆಂಗಳೂರು ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್ನಲ್ಲಿ ಇಬ್ಬರಿಗೂ ಶಾಸಕರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಈಗ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ..
ಶಿವರಾಮ ಹೆಬ್ಬರ್ ಬಿಜೆಪಿಯಿಂದ ಶಾಸಕರಾಗಿದ್ದರು ಕೂಡ ಇತ್ತೀಚಿನ ದಿನದಲ್ಲಿ ಅವರು ಬಿಜೆಪಿಯಿಂದ ದೂರ ಉಳಿದ ಹೆಬ್ಬಾರ್ ಕಾಂಗ್ರೆಸ್ ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿದ್ದರು. ಇನ್ನೂ ಇವರ ಪುತ್ರ ವಿವೇಕ ಹೆಬ್ಬರ್ ಲೋಕಸಭಾ ಚುನಾವಣಾ ಪೂರ್ವಸಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡಿದ್ದರು. ಇದೀಗ ಶಿವರಾಮ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದ್ದು, ಕಾಂಗ್ರೆಸ್ ಕಡೆ ಮುಖಮಾಡುವುದು ಬಹುತೇಕ ಪಕ್ಕಾ ಆಗಿದೆ..
ಇದನ್ನೂ ಓದಿ