ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ವಸತಿ ಶಾಲೆಗಳ ನೌಕರರ ಸಂಘದ ಶಿಕ್ಷಕರು ಹಾಗೂ ಸಿಬ್ಬಂದಿಗೆ ಸರಕಾರಿ ನೌಕರರ ಸೌಲಭ್ಯ ನೀಡುವಂತೆ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾಧಿಕಾರಿ‌ ಕಚೇರಿ ಎದರು ಧರಣಿ ಆರಂಭಿಸಿಲಾಗಿದೆ…

ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳಲ್ಲಿ 222 ಖಾಯಂ ಶಿಕ್ಷಕರು ಹಾಗೂ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಸರಕಾರದ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ವಸತಿ ಶಾಲೆಗಳನ್ನು ಸಿಬ್ಬಂದಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು.

ಇಲ್ಲಿನ ಖಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ನೌಕರಿಗೆ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು.ಮನೆ ಬಾಡಿ ಭತ್ಯೆ ಕಡಿತದಿಂದ ವಿನಾಯಿತಿ ನೀಡಬೇಕು ಹಾಗೂ ಖಾಯಂ ನೌಕರರಿಗೆ ಶೇ. 10ರಷ್ಟು ವಿಶೇಷ ಭತ್ಯೆ ಮಂಜೂರು ಮಾಡಬೇಕು ಎಂದು ಧರಣಿ‌ಮಾಡುವ ಮೂಲಕ ಆಗ್ರಹಿಸಿದರು.

ಇದನ್ನೂ ಓದಿ