ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಹೆದ್ದಾರಿಯಲ್ಲಿ ಎದುರಿಗೆ ಬಂದ ಜಾನುವಾರನ್ನ ತಪ್ಪಿಸಲು ಹೋದ ಲಾರಿಯೊಂದು ಪಲ್ಟಿಯಾಗಿ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ‌ ಬರ್ಗಿಯಲ್ಲಿ ನಡೆದಿದೆ.

ಮಂಗಳೂರಿನಿಂದ ಗೇರು ಬೀಜವನ್ನ ತುಂಬಿಕೊಂಡು ಗುಜರಾತಕ್ಕೆ ತೆರಳುತ್ತಿದ್ದ ಲಾರಿಗೆ ಬರ್ಗಿ ಸಮೀಪ‌ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜಾನುವಾರು ಎದುರಾಗಿತ್ತು ಎನ್ನಲಾಗಿದೆ.‌ಅದನ್ನ ತಪ್ಪಿಸಲು ಹೋದ ಪರಿಣಾಮ‌‌ ಹೆದ್ದಾರಿಯಲ್ಲೆ ಲಾರಿ ಪಲ್ಟಿಯಾಗಿದೆ. ಘಟನೆಯಿಂದಾಗಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು,ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ