ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ:ಭಾರೀ ಮಳೆಯಿಂದಾಗಿ ಕುಮಟಾ- ಶಿರಸಿ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಪದೆ ಪದೆ ಗುಡ್ಡಕುಸಿತ ಉಂಟಾಗುತ್ತಿದ್ದು,ಈ ಹಿನ್ನಲೆಯಲ್ಲಿ ರಾತ್ರಿ ವೇಳೆಯಲ್ಲಿ ಈ ಮಾರ್ಗದಲ್ಲಿ ಎಲ್ಲಾ ವಾಹನ ಸಂಚಾರವನ್ನ ಬಂದ್ ಮಾಡಲಾಗುತ್ತಿದೆ ಎನ್ನಲಾಗಿದ್ದು ಸಂಬಂಧಿಸಿದ ಇಲಾಖೆಯಿಂದ ಇನ್ನಷ್ಟೆ ಅಧಿಕೃತ ಆದೇಶ ಹೊರಬರಬೇಕಿದೆ…
ನಿರಂತರ ಮಳೆಯಿಂದಾಗಿ ಕುಮಟಾ ತಾಲ್ಲೂಕಿನ ದೇವಿಮನೆ ಘಟದಲ್ಲಿ ಗುಡ್ಡ ಕುಸಿತ ಉಂಟಾಗುತ್ತಿರುವುದರಿಂದ ಪ್ರತಿದಿನ ಸಾಯಂಕಾಲ 6.00 ಗಂಟೆಯಿಂದ ಬೆಳಗ್ಗೆ 6.00 ಗಂಟೆಯವರೆಗೆ ಕುಮಟಾ ಶಿರಸಿ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನ ಸಂಪೂರ್ಣವಾಗಿ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.ಈಗಾಗಲೇ ಕುಮಟಾ ಶಿರಸಿ ಹೆದ್ದಾರಿಯ ಕತಗಾಲ ಬಳಿ ಪೊಲೀಸ್ ಬ್ಯಾರಿಕೇಡ್ ಹಾಕಿಬಂದ್ ಮಾಡಲಾಗಿದೆ. ಅದೇನೆ ಇದ್ದರೂ ವಾಹನ ಸವಾರರು ಹಗಲು ವೇಳೆಯಲ್ಲಿ ಈ ಹೆದ್ದಾರಿಯಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕಿದೆ..
ಇದನ್ನೂ ತಪ್ಪೆ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ


