ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ವಿದ್ಯುತ್ ಶಾಕ್ ತಗುಲಿ 15ವರ್ಷದ ಹೆಣ್ಣಾನೆ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕುಳಗಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಕುಳಗಿ ಅರಣ್ಯ ಪ್ರದೇಶದಲ್ಲಿ ಅಂಬಿಕಾ ನಗರದಿಂದ ಗೋವಾ ಕಡೆ ಹೈ ಟೆನ್ಶನ್ ವಿದ್ಯುತ್ ತಂತಿ ಹಾದು ಹೋಗಿದೆ.ತಂತಿ ಪಕ್ಕದಲ್ಲಿದ್ದ ಮರದ ಸೊಪ್ಪು ಮುರಿಯುತ್ತಿದ್ದ ವೇಳೆ ಮರ ವಿದ್ಯುತ್ ತಂತಿಗೆ ತಗುಲಿದೆ. ಇದರಿಂದಾಗಿ ವಿದ್ಯುತ್ ಸ್ಪರ್ಷದಿಂದಾಗಿ ಕಾಡನೆ ಸ್ಥಳದಲ್ಲೇ ಆನೆ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು , ಈಗಾಗಲೆ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆ ಸಹ ನಡೆಸಲಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ಮೃತ ಆನೆಯ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿದ್ದಾರೆ. ಕೋರ್ಟ್ ಪರವಾನಗಿ ಪಡೆದು ಅಂತ್ಯಕ್ರಿಯೆ ನಡೆಸಲು ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ.
ಇದನ್ನೂ ಓದಿ
- ವಿನಾಯಕ (ವಿನು) ನಾಯ್ಕ ಅವರಿಗೆ ‘ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ’ ಪ್ರದಾನ
- ಹಬ್ಬದ ಸಂಭ್ರಮದ ಬೆನ್ನಲ್ಲೇ ಸಾವಿನ ಸರಣಿ; ಒಂದೇ ಕುಟುಂಬದ ಮೂವರು ಸೇರಿ ಹಲವರು ಬಲಿ
- ದಾಂಡೇಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಅವ್ಯವಸ್ಥೆ; ಗಬ್ಬು ನಾರುತ್ತಿರುವ ಸ್ವಿಮ್ಮಿಂಗ್ ಪೂಲ್
- ಇಡಗುಂಜಿ ವಿನಾಯಕ ನನ್ನ ಆರಾಧ್ಯ ದೇವರು; ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಧ್ಯೇಯ: ಮಂಕಾಳ ವೈದ್ಯ

