ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿಮೀ ಭಾಗ ಹಾಗೂ ಅರಣ್ಯ ಪ್ರದೇಶವನ್ನು ಒಳಗೊಂಡು ಒಟ್ಟು 5959.322 ಹೆಕ್ಟೇರ್ ವಿಸ್ತೀರ್ಣವನ್ನು ಅರಣ್ಯ,ಜೀವಪರಿಸ್ಥಿತಿ ಮತ್ತು ಇಲಾಖೆಯ ಅಡಿಯಲ್ಲಿ “ಅಪ್ಸರಕೊಂಡಾ-ಮುಗಲಿ “ಕಡಲ ವನ್ಯಜೀವಿ ಧಾಮ”ವೆಂದು(wildlife) ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ.
ಈ ಸಾಗರ ವನ್ಯಜೀವಿ ಧಾಮದಲ್ಲಿ ಪಾರಂಪರಿಕಾ ಮೀನುಗಾರಿಕೆ ಹಾಗೂ ಮೀನುಗಾರರ ಬೋಟುಗಳ ಪ್ರವೇಶದ ಮೇಲೆ ಯಾವುದೇ ನಿರ್ಬಂಧವಿಲ್ಲ. ಅದೇ ರೀತಿ ಅಲ್ಲಿರುವ ಜನರ ಈಗಿರುವ ಹಕ್ಕುಗಳ ಮೇಲೆ ಯಾವುದೇ ನಿರ್ಬಂಧವಿಲ್ಲ.
ಹೊನ್ನಾವರ ಸಮುದ್ರ ತೀರದ 8.21 ಕಿಮೀ ಭಾಗ, ಅದರಲ್ಲಿ 6 ಕಿಮೀ ಸಮುದ್ರ ಭಾಗ ಹಾಗೂ 835 ಹೆಕ್ಟೇರ್ ಅರಣ್ಯ ಪ್ರದೇಶವನ್ನು “ಅಪ್ಸರಕೊಂಡಾ-ಮುಗಲಿ ಕಡಲ ತೀರವನ್ನ ವನ್ಯಜೀವಿ ಅಭಯಾರಣ್ಯ”ವೆಂದು ಘೋಷಿಸಲಾಗಿದೆ.ಜಲಚರ ಜೀವಿಗಳ ರಕ್ಷಣೆಯೇ ಇದರ ಮುಖ್ಯ ಉದ್ದೇಶವಾಗಿದ್ದು, ಈ ಹೆಜ್ಜೆ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




