ಸುದ್ದಿಬಿಂದು‌ ಬ್ಯೂರೋ ವರದಿ
ಕುಮಟಾ: ಕುಮಟಾ – ಹೊನ್ನಾವರ ತಾಲೂಕಿನ ಜಂಟಿ ಸಾರಥ್ಯದಲ್ಲಿ ನಡೆಯುವ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಾಳೆ ಮಧ್ಯಾಹ್ನ ಕೋನಳ್ಳಿಯ ವನದುರ್ಗ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತೀ ಜಿ ಮಹಾರಾಜ್ ಅವರ ದಿವ್ಯ ಉಪಸ್ಥಿತಿಯಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಹಾಲಿ‌ ಮತ್ತು ಮಾಜಿ ಸಚಿವರು, ಶಾಸಕರು, ಚಾತುರ್ಮಾಸ್ಯ ವ್ರತಾಚರಣೆ ಸಮಿತಿಯ ಅಧ್ಯಕ್ಷರು,ಪದಾಧಿಕಾರಿಗಳು. ತಾಲೂಕಿನ ನಾಮಧಾರಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸಮನ್ವಯ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಚಾತುರ್ಮಾಸ್ಯ ವ್ರತಾಚರಣೆ ಸಮಿತಿಗಳ ಸರ್ವ ಸದಸ್ಯರು, ಸಮಾಜದ ಗಣ್ಯರು, ಹಾಗೂ ಇತರ ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ.

ನಾಮಧಾರಿ ಸಮಾಜದವರು,ಆತ್ಮೀಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧ್ಯಕ್ಷರು,ಪದಾಧಿಕಾರಿಗಳು,ಹಾಗೂ ಸರ್ವ ಸದಸ್ಯರು* ಚಾತುರ್ಮಾಸ್ಯ ವ್ರತಾಚರಣೆ ಸಮಿತಿ ಕುಮಟಾ, ಹೊನ್ನಾವರ, ಪ್ರಕಟಣೆ ಮೂಲಕ‌ ತಿಳಿಸಿದ್ದಾರೆ.

ಇದನ್ನೂ ಓದಿ