ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿದ್ದ ಸೇವೆ ಸಲ್ಲಿಸುತ್ತಿದ್ದ‌ ಕನಿಷ್ಕ, ಐಎಎಸ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ಕಾರವಾರದಿಂದ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಮುಂದಿನ ಆದೇಶದವರೆಗೆ ಅವರನ್ನ ಬೆಂಗಳೂರಿನ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿ (ಸೇವಾ ವಿಶ್ಲೇಷಣಾ ವಿಭಾಗ) ನೇಮಿಸಲಾಗಿದೆ. ಕನಿಷ್ಕಾ ಅವರು ಕಳೆದ ಒಂದುವರೆ ವರ್ಷದಿಂದ ಕಾರವಾರದಲ್ಲಿ ಸೇವೆ‌ಸಲ್ಲಿಸಿದ್ದರು.

ಇದನ್ನೂ ಓದಿ