ಭಟ್ಕಳ : ವೇಶ್ಯಾವಾಟಿಕೆ ನಡೆಸುತಿದ್ದ ಲಾಡ್ಜ್ ಒಂದರ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ಮಹಿಳೆಯನ್ನ ರಕ್ಷಣೆ ಮಾಡಿ,ಮೂವರನ್ನ ಬಂಧಿಸಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ.
ಸಿದ್ದಾಪುರದ ಗಣೇಶ್ ನಾಯ್ಕ, ಮುರುಡೇಶ್ವರದ ನಾಯ್ಕ ರೆಸಿಡೆನ್ಸಿ ಮಾಲೀಕ ವಿನಾಯಕ ಮಹಾದೇವ್ ನಾಯ್ಕ, ಆಕಾಶ್ ಅನಿಲ್ ಎಂಬುವವರನ್ನ ಬಂಧನ ಮಾಡಲಾಗಿದ್ದು,ಕಲ್ಕತ್ತಾ ಮೂಲದ ಮಹಿಳೆಯರನ್ನ ರಕ್ಷಣೆ ಮಾಡಲಾಗಿದೆ.ಬಂಧಿತರಿಂದ 4630 ನಗದು, ಎರಡು ಮೊಬೈಲ್, ಕಾಂಡಮ್ ಪ್ಯಾಕೇಟ್ ಗಳು, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.
ಈ ಲಾಡ್ಜ್ನಲ್ಲಿ ಕಳೆದ ಅನೇಕ ದಿನಗಳಿಂದ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಸಿ.ಪಿಐ ಸಂತೋಷ್ ಕಾಯ್ಕಿಣಿ ತಂಡ ಮಹಿಳೆಯರನ್ನ ರಕ್ಷಣೆ ಮಾಡಿ ಆರೋಪಿಗಳನ್ನ ಬಂಧಿಸಿದ್ದಾರೆ. ಈ ಬಗ್ಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ..