ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೂತನವಾಗಿ ಡಾ.ಯು.ಚಿತ್ತರಂಜನ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಗಣೇಶ ಇಟಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಜಿ. ಸುಬ್ರಾಯ ಭಟ್ ಬಕ್ಕಳ ತಿಳಿಸಿದ್ದಾರೆ.

ಈ ದತ್ತಿನಿಧಿಯನ್ನು ಸ್ಥಾಪಿಸಲು ಸಂಘದ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಭಟ್ ಅವರು ಮುಂದಾಗಿದ್ದು,ಡಾ.ಯು. ಚಿತ್ತರಂಜನ್ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡುವ ಸಲುವಾಗಿ ಜಿಲ್ಲಾಧ್ಯಕ್ಷ ಜಿ. ಸುಬ್ರಾಯ ಭಟ್ ಅವರೊಂದಿಗೆ ಚರ್ಚಿಸಿ ಮೂಲನಿಧಿಯನ್ನು ನೀಡಿದ್ದಾರೆ. ಈ ಪ್ರಶಸ್ತಿಯು ಈ ವರ್ಷದಿಂದ ಪ್ರಾರಂಭವಾಗಿ, ಇನ್ನೂ ಮುಂದೆ ಪ್ರತಿವರ್ಷನಡಾ. ಯು. ಚಿತ್ತರಂಜನ್ ಅವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.

ಗಣೇಶ ಇಟಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕ ‌ವಾಸಿಯಾಗಿದ್ದು, ಪ್ರಸ್ತುತ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಸಹಾಯಕ ಸುದ್ದಿ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕಾಲೇಜು ದಿನಗಳಿಂದಲೇ ಶಿರಸಿಯಿಂದ ಪತ್ರಿಕೆಗಳಿಗೆ ವರದಿಗಳನ್ನು ಕಳುಹಿಸುತ್ತಾ ಪತ್ರಿಕೋದ್ಯಮಕ್ಕೆ ಪಾದಾರ್ಪಣೆ ಮಾಡಿದರು.

೧೯೯೫ರಿಂದ ಭಟ್ಕಳದಲ್ಲಿ ಪೂರ್ಣ ಪ್ರಮಾಣದ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, “ಭಟ್ಕಳ ದುಷ್ಟರ ಅಡಗುತಾಣ” ಎನ್ನುವ ತನಿಖಾತ್ಮಕ ವರದಿಯ ಮೂಲಕ ಸಾರ್ವಜನಿಕ ಚರ್ಚೆಗೆ ನಾಂದಿ ಹಾಕಿದ್ದು, ಆಡಳಿತದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ :Health Department / ಆರೋಗ್ಯ ಇಲಾಖೆಯ ವರ್ಗಾವಣೆ ಕೌನ್ಸಿಲಿಂಗ್ ಆರಂಭ