ಸುದ್ದಿಬಿಂದು ಬ್ಯೂರೋ ವರದಿ

ಕಾರವಾರ/ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಕಾರವಾರ ತಾಲೂಕಿನ ಇಬ್ಬರೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದ್ದು ಶೈಕ್ಷಣಿಕ ಆಡಳಿತಕ್ಕೆ ಹೊಸ ಚೇತನ ಬಂದತಾಗಿದೆ.ಈ ಹಿಂದಿನ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ನೂತನ ಅಧಿಕಾರಿಗಳನ್ನ ನೇಮಕ‌ ಮಾಡಿ ಆದೇಶಿಸಲಾಗಿದೆ.

ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಹಾಸ ಪದ್ಮನಾಭ ರಾಯ್ಕರ್ ಅವರ ಸ್ಥಾನಕ್ಕೆ ಉಮೇಶ ಎನ್. ನಾಯ್ಕ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ, ಕಾರವಾರ ಅವರನ್ನು ನೇಮಕ ಮಾಡಲಾಗಿದೆ.

ಇನ್ನೂ ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಎಲ್. ಭಟ್ ಅವರ ಅವರನ್ನ ವರ್ಗಾವಣೆ ಮಾಡಿದ್ದು ಅವರ‌ ಸ್ಥಾನಕ್ಕೆ ಉದಯ ರಾಮಚಂದ್ರ ನಾಯ್ಕ, ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (DIET), ಕುಮಟಾ ಅವರನ್ನು ನಿಯೋಜನೆ ಮಾಡಲಾಗಿದೆ. ಇನ್ನೂ ಕಾರವಾರ ಹಾಗೂ ಕುಮಟಾದಲ್ಲಿ ಸೇವೆ ಸಲ್ಲಿಸಿದ್ದ ಇಬ್ಬರನ್ನ ವರ್ಗಾವಣೆ ಮಾಡಲಾಗಿದ್ದು ಯಾವುದೇ ಸ್ಥಳಕ್ಕೆ ನಿಯೋಜನೆ ಮಾಡದೆ ಕಾಯ್ದಿರಿಸಲಾಗಿದೆ…

ಅಧಿಕಾರ ಸ್ವೀಕರಿಸಿದ ಉದಯ ನಾಯ್ಕ
ಕುಮಟಾ ಕ್ಷೇತ್ರದ ನೂತನ ಕ್ಷೇತ್ರ ಶಿಕ್ಷಾಧಿಕಾರಿಯಾಗಿ ನೇಮಕಗೊಂಡಿರುವ ಉದಯ್ ನಾಯ್ಕ ಅವರು ಇಂದು ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ ಶಿಕ್ಷಕ‌ ವರ್ಗ ಉದಯ ನಾಯ್ಕ‌ ಅವರನ್ನ ಅಭಿನಂದಿಸಿದ್ದಾರೆ.

ಇದನ್ನೂ ಓದಿ:ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ