ಸುದ್ದಿಬಿಂದು ಬ್ಯೂರೋ‌ ವರದಿ
ಬೆಂಗಳೂರು, ಜೂನ್ 29: ಶಿರಸಿ–ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಬೆಂಗಳೂರಿನಲ್ಲಿ ನಡೆದ ಕ್ಷೇತ್ರದ ನಿವಾಸಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ನೂರಾರು ಮಂದಿ ಅಭಿಮಾನಿಗಳನ್ನ ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಕ್ಷೇತ್ರದ ನಿವಾಸಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ‌‌ ಮಾತನಾಡಿದ ಶಾಸಕರು, “ಬೆಂಗಳೂರುಲ್ಲಿರುವ ಶಿರಸಿ–ಸಿದ್ದಾಪುರದ ನನ್ನ ಕ್ಷೇತ್ರದ ಜನರ ಪರವಾಗಿ ಸದಾ ನಾನು ಇರುತ್ತೆನೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾನು ಸದಾ ಬದ್ಧನಾಗಿದ್ದೇನೆ”

ಬೆಂಗಳೂರು ನಗರದಲ್ಲಿ ವಾಸಿಸುವ ನಮ್ಮ ಕ್ಷೇತ್ರದ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಅವರ ಪ್ರಗತಿಗೆ ಸಹಕರಿಸುತ್ತೇನೆ. ಜಿಲ್ಲೆಯಿಂದ ದೂರವಿದ್ದರೂ ನೀವು ನನ್ನ ಗಮನದ ಹೊರಗಲ್ಲ” ಎಂದು ಭರವಸೆ ನೀಡಿದರು.

ಸಾಮಾಜಿಕ ಹಾಗೂ ಅಭಿವೃದ್ಧಿ ಚಟುವಟಿಕೆಗಳಲ್ಲಿ ಶಿರಸಿ–ಸಿದ್ದಾಪುರದ ವಾಸಿಗಳನ್ನು ಜೋಡಿಸಲು ಈ ಭೇಟಿ ಹೊಸ ಮೆಲುಕು ನೀಡಿದಂತಾಯಿತು ಎಂದರು.

ಕಾರ್ಯಕ್ರಮದ ಆರಂಭದಲ್ಲಿ ಆಯೋಜಕರು ಶಾಸಕರಿಗೆ ಸನ್ಮಾನ ಸಲ್ಲಿಸಿದರು. ಹಳೇ ವಿದ್ಯಾರ್ಥಿಗಳು, ಉದ್ಯೋಗಸ್ಥರು, ವ್ಯಾಪಾರಸ್ಥರು, ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ :ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ