ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಸ್ಪಷ್ಟಪಡಿಸಿದೆ. ನಾಳೆ ಶಿಕ್ಷೆಯ ಪ್ರಮಾಣ ಘೋಷಣೆಯಾಗಲಿದೆ.

ಬಿಗ್ ರಿಲೀಫ್ ಸಿಗುವ ನಿರೀಕ್ಷೆಯಲ್ಲಿದ್ದ ಮಾಜಿ ಸಂಸದನಿಗೆ ಈ ತೀರ್ಪು ದೊಡ್ಡ ಆಘಾತವಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು 4 ಕೇಸ್​ಗಳು ದಾಖಲಾಗಿದ್ದವು. ಇದರಲ್ಲಿ ಮನೆ ಕೆಲಸದಾಕೆ ನೀಡಿದ ಪ್ರಕರಣದ ತೀರ್ಪು ಮಾತ್ರ ಇಂದು ಪ್ರಕಟವಾಗಿದ್ದು, ಆರೋಪ ಸಾಬೀತಾಗಿದೆ.

ವಾದ-ಪ್ರತಿವಾದದ ವೇಳೆ ಕೋರ್ಟ್ ಎರಡೂ ಪಕ್ಷದ ವಕೀಲರಿಂದ ಸಾಕ್ಷ್ಯಾಧಾರಗಳ ಕುರಿತು ಹಲವು ಸ್ಪಷ್ಟನೆಗಳನ್ನು ಕೇಳಿತ್ತು. ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳು ಹಾಗೂ ಗೂಗಲ್ ಮ್ಯಾಪ್ ಮಾಹಿತಿಯನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ? ಎಂಬುದರ ಕುರಿತು ವಿಚಾರಣೆ ನಡೆಸಲಾಗಿತ್ತು. ಸ್ಯಾಮ್​ಸಂಗ್ ಜೆ4 ಮೊಬೈಲ್ ಸೀಜ್ ಮಾಡಿರುವ ವಿಷಯದಲ್ಲಿಯೂ ವಿವರಣೆ ಕೇಳಿತ್ತು. ಕೆಲ ಕಾಲ ವಿಚಾರಣೆಯನ್ನು ಮುಂದೂಡಿದ್ದ ಕೋರ್ಟ್ ಇದೀಗ ತೀರ್ಪನ್ನು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಉಳಿದ 3 ಪ್ರಕರಣಗಳ ವಿಚಾರಣೆ ಮುಂದುವರಿಯಲಿದೆ..

ಇದನ್ನೂ ಓದಿ:Teacher /ಶಿಕ್ಷಕಿ ಶ್ಯಾಮಲಾ‌‌ ನಾಯಕರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ