ಸುದ್ದಿಬಿಂದು ಬ್ಯೂರೋ ವರದಿ
ಮುಂಡಗೋಡ:ತಾಲೂಕಿನ ಕಾಳಗನಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಎರಡನೇ ತರಗತಿ ಓದುತ್ತಿರುವ ಬಾಲಕನಿಗೆ ಬಾಸುಂಡೆ ಬರುವಂತೆ ಹಲ್ಲೆ ಮಾಡಿದ ಶಿಕ್ಷಕಿಯನ್ನ ಈ ತಕ್ಷಣಕ್ಕೆ ಜಾರಿಗೆ ಬರುವಂತೆ ಶಿರಸಿ ಉಪನಿರ್ದೇಶಕರು ಅಮಾನತು ಮಾಡಿ ಆದೇಶಿಸಲಾಗಿದೆ..
ಭಾರತಿ ನಾಯ್ಕ ಎಂಬುವವರೆ ವಿದ್ಯಾರ್ಥಿಗೆ ಹಲ್ಲೆ ಮಾಡಿ ಅಮಾನತುಗೊಂಡ ಶಿಕ್ಷಕಿಯಾಗಿದ್ದಾರೆ. ಎರಡನೇ ತರಗತಿ ವಿದ್ಯಾರ್ಥಿಗೆ ಸರಿಯಾಗಿ ಬರೆಯಲು ಬರುವುದಿಲ್ಲ, ಕಲಿಸಿದ ಪಾಠವನ್ನು ಮನನ ಮಾಡಿಕೊಳ್ಳುವುದಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿ ಸಿಟ್ಟಿಗೆದ್ದು, ಬಾಸುಂಡೆ ಬರುವಂತಡ ಕೋಲಿನಿಂದ ಹೊಡೆದಿದ್ದರು. ಶಾಲೆಯಿಂದ ಮನೆಗೆ ಬಂದಿದ್ದ ವಿದ್ಯಾರ್ಥಿ ಪಾಲಕರ ಬಳಿ ಹೇಳಿಕೊಂಡಿದ್ದ, ವಿಷಯ ತಿಳಿಸಿ ಪಾಲಕರು ಸ್ಥಳೀಯರಿಗೆ ವಿಷಯ ಮುಟ್ಟಿಸಿದ್ದರು.
ಮಾಹಿತಿ ತಿಳಿದ ತಕ್ಷಣ ಬಿಇಒ ಸುಮಾ ಜಿ. ಶಾಲೆಗೆ ಭೇಟಿ ನೀಡಿ, ಬಾಲಕನ ಪಾಲಕರು ಹಾಗೂ ಶಿಕ್ಷಕಿಯಿಂದ ವಿವರ ಪಡೆದು, ವಿದ್ಯಾರ್ಥಿಯ ಆರೋಗ್ಯ ವಿಚಾರಿಸಿದರು. ಬಳಿಕ ಬಾಲಕನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ವಿದ್ಯಾರ್ಥಿಗೆ ಥಳಿಸಿದ ಘಟನೆಗೆ ಸಂಬಂಧಿಸಿದ ಸಂಪೂರ್ಣ ವರದಿಯನ್ನು ಡಿಡಿಪಿಐ ಅವರಿಗೆ ಸಲ್ಲಿಸಲಾಗಿತ್ತು. ವರದಿ ಆಧರಿಸಿ ಶಿಕ್ಷಕಿಯನ್ನು ಅಮಾನತು ಮಾಡುವ ಆದೇಶ ಹೊರಡಿಸಲಾಗಿದೆ,” ಎಂದು ಬಿಇಒ ಸುಮಾ ಜಿ. ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Teacher/ಪಾಠ ಕಲಿಯಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಥಳಿತ : ಬಾಸುಂಡೆ ಮೂಡಿಸಿದ ಶಿಕ್ಷಕಿ”




