ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕುಳಗಿ ಗ್ರಾಮದಲ್ಲಿ ಸ್ಕೂಟಿ ಎಮ್ಮೆಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಅಪಘಾತದಲ್ಲಿ ಕುಳಗಿ ಗ್ರಾಮದ ನಿವಾಸಿ ಭಾಷಾ ಸಾಬ್ ಸನದಿ (50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ, ಭಾಷಾ ಸಾಬ್ ಸನದಿ ಅವರು ದಾಂಡೇಲಿಯಿಂದ ಕುಳಗಿಯ ಕಡೆಗೆ ಸ್ಕೂಟಿ ಮೇಲೆ ಪ್ರಯಾಣಿಸುತ್ತಿದ್ದ ವೇಳೆ ಏಕಾಏಕಿ ರಸ್ತೆ ಮಧ್ಯೆ ಎಮ್ಮೆ ಅಡ್ಡ ಬಂದಿದ್ದು. ನಿಯಂತ್ರಣ ತಪ್ಪಿದ ಸ್ಕೂಟಿ ಎಮ್ಮೆಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಕೂಟಿಯಿಂದ ಉರುಳಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.