ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: 105 ವರ್ಷಗಳ ಇತಿಹಾಸದಲ್ಲಿ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ (ಕೆ.ಡಿ.ಸಿ.ಸಿ.) ಬ್ಯಾಂಕ್ ಚುನಾವಣೆಗೆ ಪ್ರಥಮ ಮಹಿಳಾ ಅಭ್ಯರ್ಥಿಯಾಗಿ ಅರ್ಬನ್ ಬ್ಯಾಂಕು ಹಾಗೂ ಕೃಷಿಯೇತರ ಸಹಕಾರಿ ಸಂಘಗಳ ಮತ ಕ್ಷೇತ್ರದಿಂದ ಸ್ಪರ್ಧಿಸಿದ ಸರಸ್ವತಿ ಎನ್. ರವಿಯವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮೊದಲು ಮಾರಿಕಾಂಬಾ ದೇವಿದೆ ವಿಶೇಣ ಪೂಜೆ ಸಲ್ಲಿಸಿ ಅವರಹ ನೂರಾರು ಸಂಖ್ಯೆಯ ಅಭಿಮಾನಿಗಳೊಂದಿಗೆ ಕೆ.ಡಿ.ಸಿ.ಸಿ. ಬ್ಯಾಂಕ್ ಆವಾರಕ್ಕೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣೆಯಿಂದ ಹಿಂದೆ ಸರಿಯುತ್ತಾರೆ ಎಂದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ..
ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು ನನ್ನ ಸ್ಫರ್ಧೆ ಸಹಕಾರಿ ಕ್ಷೇತ್ರದಲ್ಲಿ ಮಹಿಳಾ ಪ್ರಾತಿನಿಧ್ಯಕ್ಕಾಗಿಯೇ ವಿನಃ ಬೇರೆ ಯಾವುದೇ ಉದ್ದೇಶಕಲ್ಲ. ಹಲವಾರು ಸಹಕಾರಿ ಸಂಸ್ಥೆಗಳು ಹಾಗೂ ಕೆ.ಡಿ.ಸಿ.ಸಿ. ಬ್ಯಾಂಕಿನ ಮಧ್ಯೆ ಸಾಕಷ್ಟು ಅಂತರವಿರುವುದರಿಂದ ಇಂದಿಗೂ ಹಲವಾರು ಸಹಕಾರಿಗಳಿಗೆ ಬ್ಯಾಂಕಿನ ಸೌಲಭ್ಯ ಸಿಗದೇ ಇರುವುದು ವಿಷಾದನೀಯ. ಆರ್ಥಿಕವಾಗಿ ಹಿಂದುಳಿದ ಸಹಕಾರಿ ಸಂಸ್ಥೆಗಳಿಗೆ ಕೆ.ಡಿ.ಸಿ.ಸಿ. ಬ್ಯಾಂಕಿನ ಸೌಲಭ್ಯ ಸಿಗುವಂತೆ ಮಾಡುವುದು ಆಯಾ ಕ್ಷೇತ್ರದ ನಿರ್ದೇಶಕರ ಜವಾಬ್ದಾರಿಯಾಗಿದೆ.. ನಾನು ಆಯ್ಕೆಯಾದಲ್ಲಿ ಸಹಕಾರಿಗಳ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷರು, ಎಜಿಇ., ಇನ್ನರ್ವ್ಹೀಲ್ ಕ್ಲಬ್ನ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಹಾಗೂ ಸರಸ್ವತಿ ಎನ್. ರವಿಯವರ ಅಭಿಮಾನಿಗಳು, ಕಾರ್ಯಕರ್ತರು, ಎಸ್.ಎಮ್.ಎಸ್., ವಿವಿಧ ಸೌಹಾರ್ದ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.
ಇದನ್ನೂ ಓದಿ/ 48 ಗಂಟೆಗಳಲ್ಲಿ ಅಂತರ್ಜಿಲ್ಲಾ ಕಳ್ಳರ ಬಂಧಿಸಿದ ಕುಮಟಾ ಪೊಲೀಸರು